<p><strong>ರಾಮನಗರ: </strong>‘ಈ ಬಾರಿ ರಾಜ್ಯದಲ್ಲಿ ಬಿಜೆಪಿ ಯಾವ ಪಕ್ಷದ ಜೊತೆಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಜೆಡಿಎಸ್ನವರು ನಂಬಿಕೆಗೆ ಅರ್ಹರಲ್ಲ ಎಂಬುದು ನಮ್ಮ ಪಕ್ಷದ ವರಿಷ್ಠರಿಗೆ ಗೊತ್ತಾಗಿದೆ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.</p>.<p>ಕಳೆದ ವಿಧಾನಸಭೆ ಚುನಾವಣೆ ವೇಳೆ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ–ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದೆ ಎಂಬ ತಮ್ಮ ಹಳೆಯ ಆಡಿಯೊ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿರುವ ಕುರಿತು ಅವರು ಮಾಧ್ಯಮದವರಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು.</p>.<p>‘ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಲವರ್ಧನೆ ಮಾಡಿ, ಹಲವು ಮುಖಂಡರನ್ನು ಬೆಳೆಸಿದ್ದೆವು. ಆದರೆ ಅವರಿಗೆ ಟಿಕೆಟ್ ಸಿಗಲಿಲ್ಲ. ನಮ್ಮ ಪಕ್ಷದ ಬೆಳವಣಿಗೆಯನ್ನು ನಾವೇ ಮೊಟಕುಗೊಳಿಸಿಕೊಂಡಿದ್ದೆವು ಎಂದು ಸಾಂದರ್ಭಿಕವಾಗಿ ಆ ರೀತಿ ಮಾತನಾಡಿದ್ದೆ ಅಷ್ಟೇ’ ಎಂದು ಅವರು ಸ್ಪಷ್ಟನೆ ನೀಡಿದರು.</p>.<p>ಕಳೆದ ಬಾರಿ ಚುನಾವಣಾಪೂರ್ವದಲ್ಲಿ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬೆಂಬಲ ಪಡೆದಿದ್ದ ಕುಮಾರಸ್ವಾಮಿ ಚುನಾವಣೆಯಲ್ಲಿ ಗೆಲ್ಲುತ್ತಿದ್ದಂತೆ ಕಾಂಗ್ರೆಸ್ ಜೊತೆ ಹೋಗಿ ಮುಖ್ಯಮಂತ್ರಿ ಆದರು. ಜೆಡಿಎಸ್ನವರು ಎರಡೂ ಪಕ್ಷದ ಜೊತೆ ‘ಬ್ಯಾಲೆನ್ಸ್’ ಮಾಡುತ್ತಾರೆ. ಇದು ಬಿಜೆಪಿ ವರಿಷ್ಠರ ಗಮನಕ್ಕೆ ಬಂದಿದೆ. ಹಾಗಾಗಿ ಈ ಬಾರಿ ಯಾವುದೇ ಹೊಂದಾಣಿಕೆ ಇಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.</p>.<p>ಬಿಜೆಪಿಯಿಂದಲೇ ಸ್ಪರ್ಧೆ: ಕಾಂಗ್ರೆಸ್ ಸೇರುವ ವದಂತಿಗಳ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ ಸಿ.ಪಿ. ಯೋಗೇಶ್ವರ್, ‘ಅದೆಲ್ಲ ಬರೀ ಸುಳ್ಳು ಸುದ್ದಿ. ಚನ್ನಪಟ್ಟಣದಲ್ಲಿ ಈಗಾಗಲೇ ಬಿಜೆಪಿ ಅಭ್ಯರ್ಥಿಯಾಗಿ ಪ್ರಚಾರ ಮಾಡುತ್ತಿದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>‘ಈ ಬಾರಿ ರಾಜ್ಯದಲ್ಲಿ ಬಿಜೆಪಿ ಯಾವ ಪಕ್ಷದ ಜೊತೆಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಜೆಡಿಎಸ್ನವರು ನಂಬಿಕೆಗೆ ಅರ್ಹರಲ್ಲ ಎಂಬುದು ನಮ್ಮ ಪಕ್ಷದ ವರಿಷ್ಠರಿಗೆ ಗೊತ್ತಾಗಿದೆ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.</p>.<p>ಕಳೆದ ವಿಧಾನಸಭೆ ಚುನಾವಣೆ ವೇಳೆ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ–ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದೆ ಎಂಬ ತಮ್ಮ ಹಳೆಯ ಆಡಿಯೊ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿರುವ ಕುರಿತು ಅವರು ಮಾಧ್ಯಮದವರಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು.</p>.<p>‘ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಲವರ್ಧನೆ ಮಾಡಿ, ಹಲವು ಮುಖಂಡರನ್ನು ಬೆಳೆಸಿದ್ದೆವು. ಆದರೆ ಅವರಿಗೆ ಟಿಕೆಟ್ ಸಿಗಲಿಲ್ಲ. ನಮ್ಮ ಪಕ್ಷದ ಬೆಳವಣಿಗೆಯನ್ನು ನಾವೇ ಮೊಟಕುಗೊಳಿಸಿಕೊಂಡಿದ್ದೆವು ಎಂದು ಸಾಂದರ್ಭಿಕವಾಗಿ ಆ ರೀತಿ ಮಾತನಾಡಿದ್ದೆ ಅಷ್ಟೇ’ ಎಂದು ಅವರು ಸ್ಪಷ್ಟನೆ ನೀಡಿದರು.</p>.<p>ಕಳೆದ ಬಾರಿ ಚುನಾವಣಾಪೂರ್ವದಲ್ಲಿ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬೆಂಬಲ ಪಡೆದಿದ್ದ ಕುಮಾರಸ್ವಾಮಿ ಚುನಾವಣೆಯಲ್ಲಿ ಗೆಲ್ಲುತ್ತಿದ್ದಂತೆ ಕಾಂಗ್ರೆಸ್ ಜೊತೆ ಹೋಗಿ ಮುಖ್ಯಮಂತ್ರಿ ಆದರು. ಜೆಡಿಎಸ್ನವರು ಎರಡೂ ಪಕ್ಷದ ಜೊತೆ ‘ಬ್ಯಾಲೆನ್ಸ್’ ಮಾಡುತ್ತಾರೆ. ಇದು ಬಿಜೆಪಿ ವರಿಷ್ಠರ ಗಮನಕ್ಕೆ ಬಂದಿದೆ. ಹಾಗಾಗಿ ಈ ಬಾರಿ ಯಾವುದೇ ಹೊಂದಾಣಿಕೆ ಇಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.</p>.<p>ಬಿಜೆಪಿಯಿಂದಲೇ ಸ್ಪರ್ಧೆ: ಕಾಂಗ್ರೆಸ್ ಸೇರುವ ವದಂತಿಗಳ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ ಸಿ.ಪಿ. ಯೋಗೇಶ್ವರ್, ‘ಅದೆಲ್ಲ ಬರೀ ಸುಳ್ಳು ಸುದ್ದಿ. ಚನ್ನಪಟ್ಟಣದಲ್ಲಿ ಈಗಾಗಲೇ ಬಿಜೆಪಿ ಅಭ್ಯರ್ಥಿಯಾಗಿ ಪ್ರಚಾರ ಮಾಡುತ್ತಿದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>