ರಾಮನಗರ: ನಿತ್ಯಾನಂದ ಸ್ವಾಮೀಜಿ ಇಬ್ಬರು ಅನುಯಾಯಿಗಳ ವಿರುದ್ಧ ಇಲ್ಲಿಯ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಜಾಮೀನು ರಹಿತ ವಾರಂಟ್ ಹೊರಡಿಸಿದೆ.
ಭಕ್ತೆಯೊಬ್ಬರ ಮೇಲೆ ನಿತ್ಯಾನಂದ ಸ್ವಾಮೀಜಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಇಬ್ಬರು ಅನುಯಾಯಿಗಳಾದ ಪ್ರಕರಣದ ಮೂರನೇ ಆರೋಪಿ ಶಿವವಲ್ಲಭನೇನಿ ಮತ್ತು ಆರನೇ ಆರೋಪಿ ಜಮುನಾ ರಾಣಿ ವಿರುದ್ಧ ವಾರಂಟ್ ಜಾರಿಯಾಗಿದೆ.
ಈ ಇಬ್ಬರೂ ವಿಚಾರಣೆಗಾಗಿ ಕೋರ್ಟ್ ಎದುರು ಹಾಜರಾಗದೆ ನ್ಯಾಯಾಲಯದ ಷರತ್ತುಗಳನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಿದ ನ್ಯಾಯಾಧೀಶರು, ಇಬ್ಬರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದರು. ಆಗಸ್ಟ್ 5ಕ್ಕೆ ವಿಚಾರಣೆ ಮುಂದೂಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.