<p><strong>ಚನ್ನಪಟ್ಟಣ:</strong> ತಾಲ್ಲೂಕಿನ ದೊಡ್ಡಮಳೂರು ಗ್ರಾಮದಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರ ಆಯೋಜಿಸಲಾಗಿತ್ತು.</p>.<p>ಒಂದು ವಾರ ನಡೆದ ಶಿಬಿರದ ವೇಳೆ ಗ್ರಾಮದ ದೇವಸ್ಥಾನದ ಆವರಣ, ಸರ್ಕಾರಿ ಶಾಲೆಯ ಆವರಣ, ಕಲ್ಯಾಣಿ ಸ್ವಚ್ಛಗೊಳಿಸಲಾಯಿತು. ಸ್ವಚ್ಛ ಭಾರತ್ ಅಭಿಯಾನದ ಅಂಗವಾಗಿ ಗ್ರಾಮದಲ್ಲಿ ಜಾಗೃತಿ ಜಾಥಾ, ಪರಿಸರ ಜಾಗೃತಿ ಜಾಥಾ ನಡೆಸಲಾಯಿತು.</p>.<p>ಸಾರ್ವಜನಿಕ ಆಸ್ಪತ್ರೆಯ ಆಪ್ತ ಸಮಾಲೋಚಕ ನವೀನ್ ಕುಮಾರ್, ರಾಮನಗರ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ವಿಜ್ಞಾನ ಉಪನ್ಯಾಸಕಿ ಬಿ.ಆರ್. ಅನುರಾಧಾ, ಜಿಲ್ಲಾ ಅಗ್ನಿ ಶಾಮಕ ದಳದ ಅಧಿಕಾರಿಗಳಾದ ವೆಂಕಟೇಶ್ ಹಾಗೂ ಸುಕೇಶ್ ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಸಿಕೊಟ್ಟರು. </p>.<p>ಯೋಗಗುರು ವಿ.ಆರ್.ನಂದಕುಮಾರ್ ಅಷ್ಟಾಂಗ ಯೋಗ ನಡೆಸಿಕೊಟ್ಟರು. ಮತದಾನದ ಬಗ್ಗೆ ಗ್ರಾಮಸ್ಥರಲ್ಲಿ ಜಾಗೃತಿ ಜಾಥಾ ಕಾರ್ಯಕ್ರಮ ನಡೆಸಿಕೊಡಲಾಯಿತು. </p>.<p>ಪ್ರಾಂಶುಪಾಲೆ ಡಿ.ಅರುಣ, ದೊಡ್ಡಮಳೂರು ಗ್ರಾ.ಪಂ. ಉಪಾಧ್ಯಕ್ಷೆ ಅನಿತಾ, ಎಂ.ಎನ್. ಕೃಷ್ಣಕುಮಾರ್, ಮುಖ್ಯಶಿಕ್ಷಕಿ ಅಕ್ಕೂಬಾಯಿ, ದೊಡ್ಡಕೆಂಪೇಗೌಡ,ಬಿ.ಎಲ್.ಪ್ರಕಾಶ್, ವಿ.ಶ್ರೀನಿವಾಸ್ ಭಾಗವಹಿಸಿದ್ದರು.</p>.<p>ಸಮಾರೋಪ ಸಮಾರಂಭದಲ್ಲಿ ರಾಮನಗರ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲ ಉಮೇಶ್, ಪತ್ರಕರ್ತ ಎಚ್.ಎಂ. ರಮೇಶ್ ಇತರರು ಭಾಗವಹಿಸಿದ್ದರು. ಶಿಬಿರದ ಸಂಯೋಜನಾಧಿಕಾರಿಯಾಗಿ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕಿ ಸಿ.ಆರ್. ಸುಷ್ಮಾ ಕಾರ್ಯನಿರ್ವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ತಾಲ್ಲೂಕಿನ ದೊಡ್ಡಮಳೂರು ಗ್ರಾಮದಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರ ಆಯೋಜಿಸಲಾಗಿತ್ತು.</p>.<p>ಒಂದು ವಾರ ನಡೆದ ಶಿಬಿರದ ವೇಳೆ ಗ್ರಾಮದ ದೇವಸ್ಥಾನದ ಆವರಣ, ಸರ್ಕಾರಿ ಶಾಲೆಯ ಆವರಣ, ಕಲ್ಯಾಣಿ ಸ್ವಚ್ಛಗೊಳಿಸಲಾಯಿತು. ಸ್ವಚ್ಛ ಭಾರತ್ ಅಭಿಯಾನದ ಅಂಗವಾಗಿ ಗ್ರಾಮದಲ್ಲಿ ಜಾಗೃತಿ ಜಾಥಾ, ಪರಿಸರ ಜಾಗೃತಿ ಜಾಥಾ ನಡೆಸಲಾಯಿತು.</p>.<p>ಸಾರ್ವಜನಿಕ ಆಸ್ಪತ್ರೆಯ ಆಪ್ತ ಸಮಾಲೋಚಕ ನವೀನ್ ಕುಮಾರ್, ರಾಮನಗರ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ವಿಜ್ಞಾನ ಉಪನ್ಯಾಸಕಿ ಬಿ.ಆರ್. ಅನುರಾಧಾ, ಜಿಲ್ಲಾ ಅಗ್ನಿ ಶಾಮಕ ದಳದ ಅಧಿಕಾರಿಗಳಾದ ವೆಂಕಟೇಶ್ ಹಾಗೂ ಸುಕೇಶ್ ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಸಿಕೊಟ್ಟರು. </p>.<p>ಯೋಗಗುರು ವಿ.ಆರ್.ನಂದಕುಮಾರ್ ಅಷ್ಟಾಂಗ ಯೋಗ ನಡೆಸಿಕೊಟ್ಟರು. ಮತದಾನದ ಬಗ್ಗೆ ಗ್ರಾಮಸ್ಥರಲ್ಲಿ ಜಾಗೃತಿ ಜಾಥಾ ಕಾರ್ಯಕ್ರಮ ನಡೆಸಿಕೊಡಲಾಯಿತು. </p>.<p>ಪ್ರಾಂಶುಪಾಲೆ ಡಿ.ಅರುಣ, ದೊಡ್ಡಮಳೂರು ಗ್ರಾ.ಪಂ. ಉಪಾಧ್ಯಕ್ಷೆ ಅನಿತಾ, ಎಂ.ಎನ್. ಕೃಷ್ಣಕುಮಾರ್, ಮುಖ್ಯಶಿಕ್ಷಕಿ ಅಕ್ಕೂಬಾಯಿ, ದೊಡ್ಡಕೆಂಪೇಗೌಡ,ಬಿ.ಎಲ್.ಪ್ರಕಾಶ್, ವಿ.ಶ್ರೀನಿವಾಸ್ ಭಾಗವಹಿಸಿದ್ದರು.</p>.<p>ಸಮಾರೋಪ ಸಮಾರಂಭದಲ್ಲಿ ರಾಮನಗರ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲ ಉಮೇಶ್, ಪತ್ರಕರ್ತ ಎಚ್.ಎಂ. ರಮೇಶ್ ಇತರರು ಭಾಗವಹಿಸಿದ್ದರು. ಶಿಬಿರದ ಸಂಯೋಜನಾಧಿಕಾರಿಯಾಗಿ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕಿ ಸಿ.ಆರ್. ಸುಷ್ಮಾ ಕಾರ್ಯನಿರ್ವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>