<p><strong>ಮಾಗಡಿ:</strong> ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜು ವತಿಯಿಂದ ಆಯೋಜಿಸಿದ್ದ ಎನ್ಎಸ್ಎಸ್ ವಿಶೇಷ ವಾರ್ಷಿಕ ಶಿಬಿರ ನಡೆಯಿತು.</p>.<p>ಈ ವೇಳೆ ಸರ್ಕಲ್ ಇನ್ಸ್ಪೆಕ್ಟರ್ ಗಿರಿರಾಜ.ಜಿ.ವೈ. ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಸಮಾಜ ಸೇವೆಯ ಅನುಭವ ಕಲಿಸುತ್ತದೆ. ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ, ಸೇವಾ ಭಾವನೆಯನ್ನು ಬೆಳೆಸಲು ಎನ್ಎಸ್ಎಸ್ ಶಿಬಿರಗಳು ಸಹಕಾರಿಯಾಗಿವೆ ಎಂದರು.</p>.<p>ತಾಲ್ಲೂಕಿನಲ್ಲಿ ಬಾಲ್ಯವಿವಾಹಗಳು ಅಧಿಕವಾಗಿವೆ. ಅಪ್ರಾಪ್ತರು ಮದ್ಯವ್ಯಸನಿಗಳಾಗುತ್ತಿದ್ದಾರೆ. ಆನ್ಲೈನ್ ಜೂಜಾಟ ಹೆಚ್ಚಾಗಿದೆ. ಹಾಗಾಗಿ ಶಿಬಿರಾರ್ಥಿಗಳು ಸೇವೆಯ ಜತೆಗೆ ಗ್ರಾಮೀಣ ಜನತೆಯಲ್ಲಿ ಸಾಮಾಜಿಕ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.</p>.<p>ಶಿಬಿರಾಧಿಕಾರಿ ಡಾ.ನಂಜುಂಡ.ಪಿ.ಮಾತನಾಡಿ, ಮಾಗಡಿಯಲ್ಲಿ ಚಾರಿತ್ರಿಕ, ಸಾಹಿತ್ಯ, ಜನಪದ ಮತ್ತು ಬುಡಕಟ್ಟು ಶೋಷಿತ ಸಮುದಾಯಗಳ ಸ್ಥಿತಿಗತಿ ಅಧ್ಯಯನ ಮಾಡುವ ಜತೆಗೆ ಕೆಂಪೇಗೌಡ ಆಳ್ವಿಕೆಯ ಮಹತ್ವ ತಿಳಿಯಲು ಶಿಬಿರ ಆಯೋಜಿಸಲಾಗಿದೆ ಎಂದರು.</p>.<p>ಶಿಬಿರಾಧಿಕಾರಿ ಡಾ.ಚಲುವರಾಜು ಮಾತನಾಡಿ, ಬೆಟ್ಟಗುಡ್ಡಗಳು, ಕಣಿವೆ ಕಂದರ, ಗುಡಿಗೋಪುರ, ಕೆರೆಕಟ್ಟೆಗಳಿಂದ ಕೂಡಿದ ಅರೆಮಲೆನಾಡು ಮಾಗಡಿಯ ಪರಿಸರ ರಕ್ಷಣೆಯ ಬಗ್ಗೆ ಜನತೆಯಲ್ಲಿ ಅರಿವು ಮೂಡಿಸಲಾಗುವುದು ಎಂದರು.</p>.<p>ಮಾಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಜಣ್ಣ.ಡಿ., ಅರ್ಚಕ ವೆಂಕಟೇಶ್ ಐಯ್ಯಂಗಾರ್, ಉಪನ್ಯಾಸಕಿ ಮಾಡಬಾಳ್ ಅನಿತಾ, ಹಳೆಯ ವಿದ್ಯಾರ್ಥಿ ಹೂಜುಗಲ್ ತನುಜ್ ಕುಮಾರ್ ಎನ್.ಎಸ್.ಎಸ್.ಶಿಬಿರದ ಬಗ್ಗೆ ಮಾತಾನಾಡಿದರು. ಶಿಬಿರಾರ್ಥಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ:</strong> ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜು ವತಿಯಿಂದ ಆಯೋಜಿಸಿದ್ದ ಎನ್ಎಸ್ಎಸ್ ವಿಶೇಷ ವಾರ್ಷಿಕ ಶಿಬಿರ ನಡೆಯಿತು.</p>.<p>ಈ ವೇಳೆ ಸರ್ಕಲ್ ಇನ್ಸ್ಪೆಕ್ಟರ್ ಗಿರಿರಾಜ.ಜಿ.ವೈ. ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಸಮಾಜ ಸೇವೆಯ ಅನುಭವ ಕಲಿಸುತ್ತದೆ. ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ, ಸೇವಾ ಭಾವನೆಯನ್ನು ಬೆಳೆಸಲು ಎನ್ಎಸ್ಎಸ್ ಶಿಬಿರಗಳು ಸಹಕಾರಿಯಾಗಿವೆ ಎಂದರು.</p>.<p>ತಾಲ್ಲೂಕಿನಲ್ಲಿ ಬಾಲ್ಯವಿವಾಹಗಳು ಅಧಿಕವಾಗಿವೆ. ಅಪ್ರಾಪ್ತರು ಮದ್ಯವ್ಯಸನಿಗಳಾಗುತ್ತಿದ್ದಾರೆ. ಆನ್ಲೈನ್ ಜೂಜಾಟ ಹೆಚ್ಚಾಗಿದೆ. ಹಾಗಾಗಿ ಶಿಬಿರಾರ್ಥಿಗಳು ಸೇವೆಯ ಜತೆಗೆ ಗ್ರಾಮೀಣ ಜನತೆಯಲ್ಲಿ ಸಾಮಾಜಿಕ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.</p>.<p>ಶಿಬಿರಾಧಿಕಾರಿ ಡಾ.ನಂಜುಂಡ.ಪಿ.ಮಾತನಾಡಿ, ಮಾಗಡಿಯಲ್ಲಿ ಚಾರಿತ್ರಿಕ, ಸಾಹಿತ್ಯ, ಜನಪದ ಮತ್ತು ಬುಡಕಟ್ಟು ಶೋಷಿತ ಸಮುದಾಯಗಳ ಸ್ಥಿತಿಗತಿ ಅಧ್ಯಯನ ಮಾಡುವ ಜತೆಗೆ ಕೆಂಪೇಗೌಡ ಆಳ್ವಿಕೆಯ ಮಹತ್ವ ತಿಳಿಯಲು ಶಿಬಿರ ಆಯೋಜಿಸಲಾಗಿದೆ ಎಂದರು.</p>.<p>ಶಿಬಿರಾಧಿಕಾರಿ ಡಾ.ಚಲುವರಾಜು ಮಾತನಾಡಿ, ಬೆಟ್ಟಗುಡ್ಡಗಳು, ಕಣಿವೆ ಕಂದರ, ಗುಡಿಗೋಪುರ, ಕೆರೆಕಟ್ಟೆಗಳಿಂದ ಕೂಡಿದ ಅರೆಮಲೆನಾಡು ಮಾಗಡಿಯ ಪರಿಸರ ರಕ್ಷಣೆಯ ಬಗ್ಗೆ ಜನತೆಯಲ್ಲಿ ಅರಿವು ಮೂಡಿಸಲಾಗುವುದು ಎಂದರು.</p>.<p>ಮಾಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಜಣ್ಣ.ಡಿ., ಅರ್ಚಕ ವೆಂಕಟೇಶ್ ಐಯ್ಯಂಗಾರ್, ಉಪನ್ಯಾಸಕಿ ಮಾಡಬಾಳ್ ಅನಿತಾ, ಹಳೆಯ ವಿದ್ಯಾರ್ಥಿ ಹೂಜುಗಲ್ ತನುಜ್ ಕುಮಾರ್ ಎನ್.ಎಸ್.ಎಸ್.ಶಿಬಿರದ ಬಗ್ಗೆ ಮಾತಾನಾಡಿದರು. ಶಿಬಿರಾರ್ಥಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>