<p><strong>ಮಾಗಡಿ:</strong> ತಾಲ್ಲೂಕು ಹಿಂದುಳಿದ ಜಾತಿಗಳ ಮಹಾ ಒಕ್ಕೂಟದ ಅಧ್ಯಕ್ಷರನ್ನಾಗಿ ಪುರಸಭೆ ಸದಸ್ಯ ಎಂ.ಎನ್ ಮಂಜುನಾಥ್ ಅವರನ್ನು ಸಭೆಯಲ್ಲಿ ಸರ್ವನುಮತದಿಂದ ಆಯ್ಕೆ ಮಾಡಲಾಯಿತು.</p>.<p>ಪಟ್ಟಣದ ಸಿದ್ದಾರೂಢ ಭವನದಲ್ಲಿ ಶನಿವಾರ ನಡೆದ ಹಿಂದುಳಿದ ಜಾತಿಗಳ ಮಹಾ ಒಕ್ಕೂಟದ ಸಭೆಯಲ್ಲಿ ಆಯ್ಕೆ ನಡೆಯಿತು. ನಂತರ ಪ್ರತಿಕ್ರಿಯಿಸಿದ ನೂತನ ಅಧ್ಯಕ್ಷ ಮಂಜುನಾಥ್, ಮುಂದಿನ ವಾರದಲ್ಲಿ ತಾಲ್ಲೂಕಿನಲ್ಲಿ ನೆಲೆಸಿರುವ ಎಲ್ಲ ಒಬಿಸಿ ಮುಖಂಡರ ಸಭೆ ಕರೆದು ತಾಲ್ಲೂಕು ಘಟಕ ರಚಿಸಲಾಗುವುದು ಎಂದರು.</p>.<p>ಜಿಲ್ಲಾ ಹಿಂದುಳಿದ ಜಾತಿಗಳ ಮಹಾ ಒಕ್ಕೂಟದ ಅಧ್ಯಕ್ಷ ರೈಡ್ ನಾಗರಾಜು ಮಾತನಾಡಿ, ಆ.5ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ.ದೇವರಾಜ ಅರಸು ಜಯಂತಿ ಆಚರಿಸುವ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಪೂರ್ವಭಾವಿ ಸಭೆಯಲ್ಲಿ ಜಿಲ್ಲೆಯ 5 ತಾಲ್ಲೂಕುಗಳ ಹಿಂದುಳಿದ 18 ಸಮುದಾಯಗಳ ಮುಖಂಡರು ತಪ್ಪದೆ ಭಾಗವಹಿಸಿಬೇಕು ಎಂದರು.</p>.<p>ಒಬಿಸಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಟಿ.ವಿ.ನಾರಾಯಣ ಮಾತನಾಡಿ, ಜಿಲ್ಲೆಯಲ್ಲಿ ಹಿಂದುಳಿದ ಸಮುದಾಯಗಳಿಗೆ ಸೂಕ್ತ ಪ್ರಾತಿನಿದ್ಯ ಸಿಕ್ಕಿಲ್ಲ. ಸರ್ಕಾರಿ ಸವಲತ್ತು ಕೂಡ ಒಬಿಸಿ ಸಮುದಾಯಗಳಿಗೆ ತಲುಪುತ್ತಿಲ್ಲ. ಸವಲತ್ತು ಪಡೆಯಲು ಸಂಘಟಿತರಾಗಬೇಕಾಗಿದೆ ಎಂದರು.</p>.<p>ತಾಲ್ಲೂಕು.ಡಿ.ದೇವರಾಜ ಅರಸು ಹಿಂದುಳಿದ ಜಾತಿಗಳ ವಿಚಾರ ವೇದಿಕೆ ಅಧ್ಯಕ್ಷ ಪಿ.ವಿ.ಸೀತಾರಾಮ್ ಮಾತನಾಡಿ, ಒಬಿಸಿ ಸಮುದಾಯಗಳ ಸಂಘಟನೆ ಅನಿವಾರ್ಯ ಎಂದರು.</p>.<p>ತಾಲ್ಲೂಕು.ಡಿ.ದೇವರಾಜ ಅರಸು ಹಿಂದುಳಿದ ಜಾತಿಗಳ ವಿಚಾರ ವೇದಿಕೆ ಪ್ರಧಾನ ಕಾರ್ಯದರ್ಶಿ ಮಾರಣ್ಣ ಮಾತನಾಡಿ, ತಾಲ್ಲೂಕಿನಲ್ಲಿ ಡಿ.ದೇವರಾಜ ಅರಸು ಆಶಯ ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಿರ್ಲಕ್ಷ್ಯವಹಿಸಿದ್ದಾರೆ. ಶಿಕ್ಷಣ, ಸಂಘಟನೆ, ಹೋರಾಟವನ್ನು ಒಬಿಸಿಗಳು ರೂಢಿಸಿಕೊಳ್ಳಬೇಕಾಗಿದೆ ಎಂದರು.</p>.<p>ಹಿಂದುಳಿದ ಸಮುದಾಯಗಳ ಮುಖಂಡರು, ಪುರಸಭೆ ಸದಸ್ಯ ಜಯರಾಮಯ್ಯ, ಮಾಜಿ ಸದಸ್ಯರಾದ ಶಿವಕುಮಾರ್,ಮಹೇಶ್, ಜಯಲಕ್ಷ್ಮೀ ರೇವಣ್ಣ, ಮುಖಂಡರಾದ ಮುನಿಕೃಷ್ಣ, ಲಕ್ಷ್ಮಿಪತಿರಾಜು, ಎಂ.ಬಿ.ಬಸವರಾಜು ಮಾತನಾಡಿದರು.</p>.<p>ಒಬಿಸಿ ಸಮುದಾಯಗಳ ಮುಖಂಡರಾದ ರಂಗಪ್ರಕಾಶ್, ಎಚ್.ಶಿವಕುಮಾರ್, ಕೆಂಪಣ್ಣ, ಭೈರಣ್ಣ, ಪೂಜಾರಿ ಚಿತ್ತಯ್ಯ, ಕದಂಬ ಗಂಗರಾಜು, ಟಿ.ಎಂ.ಶ್ರೀನಿವಾಸ್, ಜಗದೀಶ್, ದಯಾನಂದ್, ಭರತ್, ವೆಂಕಟೇಶಯ್ಯ, ರಮೇಶ್, ಕನಕ, ಮಂಜುನಾಥಾಚಾರ್ ಹಾಗೂ ಸಮುದಾಯ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ:</strong> ತಾಲ್ಲೂಕು ಹಿಂದುಳಿದ ಜಾತಿಗಳ ಮಹಾ ಒಕ್ಕೂಟದ ಅಧ್ಯಕ್ಷರನ್ನಾಗಿ ಪುರಸಭೆ ಸದಸ್ಯ ಎಂ.ಎನ್ ಮಂಜುನಾಥ್ ಅವರನ್ನು ಸಭೆಯಲ್ಲಿ ಸರ್ವನುಮತದಿಂದ ಆಯ್ಕೆ ಮಾಡಲಾಯಿತು.</p>.<p>ಪಟ್ಟಣದ ಸಿದ್ದಾರೂಢ ಭವನದಲ್ಲಿ ಶನಿವಾರ ನಡೆದ ಹಿಂದುಳಿದ ಜಾತಿಗಳ ಮಹಾ ಒಕ್ಕೂಟದ ಸಭೆಯಲ್ಲಿ ಆಯ್ಕೆ ನಡೆಯಿತು. ನಂತರ ಪ್ರತಿಕ್ರಿಯಿಸಿದ ನೂತನ ಅಧ್ಯಕ್ಷ ಮಂಜುನಾಥ್, ಮುಂದಿನ ವಾರದಲ್ಲಿ ತಾಲ್ಲೂಕಿನಲ್ಲಿ ನೆಲೆಸಿರುವ ಎಲ್ಲ ಒಬಿಸಿ ಮುಖಂಡರ ಸಭೆ ಕರೆದು ತಾಲ್ಲೂಕು ಘಟಕ ರಚಿಸಲಾಗುವುದು ಎಂದರು.</p>.<p>ಜಿಲ್ಲಾ ಹಿಂದುಳಿದ ಜಾತಿಗಳ ಮಹಾ ಒಕ್ಕೂಟದ ಅಧ್ಯಕ್ಷ ರೈಡ್ ನಾಗರಾಜು ಮಾತನಾಡಿ, ಆ.5ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ.ದೇವರಾಜ ಅರಸು ಜಯಂತಿ ಆಚರಿಸುವ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಪೂರ್ವಭಾವಿ ಸಭೆಯಲ್ಲಿ ಜಿಲ್ಲೆಯ 5 ತಾಲ್ಲೂಕುಗಳ ಹಿಂದುಳಿದ 18 ಸಮುದಾಯಗಳ ಮುಖಂಡರು ತಪ್ಪದೆ ಭಾಗವಹಿಸಿಬೇಕು ಎಂದರು.</p>.<p>ಒಬಿಸಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಟಿ.ವಿ.ನಾರಾಯಣ ಮಾತನಾಡಿ, ಜಿಲ್ಲೆಯಲ್ಲಿ ಹಿಂದುಳಿದ ಸಮುದಾಯಗಳಿಗೆ ಸೂಕ್ತ ಪ್ರಾತಿನಿದ್ಯ ಸಿಕ್ಕಿಲ್ಲ. ಸರ್ಕಾರಿ ಸವಲತ್ತು ಕೂಡ ಒಬಿಸಿ ಸಮುದಾಯಗಳಿಗೆ ತಲುಪುತ್ತಿಲ್ಲ. ಸವಲತ್ತು ಪಡೆಯಲು ಸಂಘಟಿತರಾಗಬೇಕಾಗಿದೆ ಎಂದರು.</p>.<p>ತಾಲ್ಲೂಕು.ಡಿ.ದೇವರಾಜ ಅರಸು ಹಿಂದುಳಿದ ಜಾತಿಗಳ ವಿಚಾರ ವೇದಿಕೆ ಅಧ್ಯಕ್ಷ ಪಿ.ವಿ.ಸೀತಾರಾಮ್ ಮಾತನಾಡಿ, ಒಬಿಸಿ ಸಮುದಾಯಗಳ ಸಂಘಟನೆ ಅನಿವಾರ್ಯ ಎಂದರು.</p>.<p>ತಾಲ್ಲೂಕು.ಡಿ.ದೇವರಾಜ ಅರಸು ಹಿಂದುಳಿದ ಜಾತಿಗಳ ವಿಚಾರ ವೇದಿಕೆ ಪ್ರಧಾನ ಕಾರ್ಯದರ್ಶಿ ಮಾರಣ್ಣ ಮಾತನಾಡಿ, ತಾಲ್ಲೂಕಿನಲ್ಲಿ ಡಿ.ದೇವರಾಜ ಅರಸು ಆಶಯ ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಿರ್ಲಕ್ಷ್ಯವಹಿಸಿದ್ದಾರೆ. ಶಿಕ್ಷಣ, ಸಂಘಟನೆ, ಹೋರಾಟವನ್ನು ಒಬಿಸಿಗಳು ರೂಢಿಸಿಕೊಳ್ಳಬೇಕಾಗಿದೆ ಎಂದರು.</p>.<p>ಹಿಂದುಳಿದ ಸಮುದಾಯಗಳ ಮುಖಂಡರು, ಪುರಸಭೆ ಸದಸ್ಯ ಜಯರಾಮಯ್ಯ, ಮಾಜಿ ಸದಸ್ಯರಾದ ಶಿವಕುಮಾರ್,ಮಹೇಶ್, ಜಯಲಕ್ಷ್ಮೀ ರೇವಣ್ಣ, ಮುಖಂಡರಾದ ಮುನಿಕೃಷ್ಣ, ಲಕ್ಷ್ಮಿಪತಿರಾಜು, ಎಂ.ಬಿ.ಬಸವರಾಜು ಮಾತನಾಡಿದರು.</p>.<p>ಒಬಿಸಿ ಸಮುದಾಯಗಳ ಮುಖಂಡರಾದ ರಂಗಪ್ರಕಾಶ್, ಎಚ್.ಶಿವಕುಮಾರ್, ಕೆಂಪಣ್ಣ, ಭೈರಣ್ಣ, ಪೂಜಾರಿ ಚಿತ್ತಯ್ಯ, ಕದಂಬ ಗಂಗರಾಜು, ಟಿ.ಎಂ.ಶ್ರೀನಿವಾಸ್, ಜಗದೀಶ್, ದಯಾನಂದ್, ಭರತ್, ವೆಂಕಟೇಶಯ್ಯ, ರಮೇಶ್, ಕನಕ, ಮಂಜುನಾಥಾಚಾರ್ ಹಾಗೂ ಸಮುದಾಯ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>