ರಾಮನಗರ: ಉತ್ತರಪ್ರದೇಶದ ಗ್ಯಾನವಾಪಿ ಮಸೀದಿಯಲ್ಲಿ ಕೋರ್ಟ್ ಪೂಜೆಗೆ ಅವಕಾಶ ಕಲ್ಪಿಸಿದ ತೀರ್ಪು ಕುರಿತು ಫೇಸ್ಬುಕ್ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ನಗರದ ವಕೀಲ ಹಾಗೂ ಎಸ್ಡಿಪಿಐ ಮುಖಂಡ ಚಾನ್ ಪಾಷ ಅವರನ್ನು ರಾಮನಗರ ಪುರ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಪಾಷ ಅವರ ಆಕ್ಷೇಪಾರ್ಹ ಪೋಸ್ಟ್ ಕುರಿತು ನಗರದ ಬಿಜೆಪಿ ಮುಖಂಡ ಪಿ. ಶಿವಾನಂದ ಅವರು ನೀಡಿದ್ದ ದೂರಿನ ಮೇರೆಗೆ, ಫೆ. 3ರಂದು ಪಾಷ ವಿರುದ್ಧ ಐಪಿಸಿ 504, 505(3) ಕಲಂಗಳಡಿ ಎಫ್ಐಆರ್ ದಾಖಲಾಗಿತ್ತು.
ಬೆಳಿಗ್ಗೆಯೇ ಪಾಷ ಅವರನ್ನು ಬಂಧಿಸಿದ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿದರು.