ಜಿಲ್ಲಾಧಿಕಾರಿಯಿಂದ ಅನುಮತಿ ಪಡೆಯದೆ ಮದುವೆ ಕಾರ್ಯಕ್ರಮದಲ್ಲಿ ಹೆಚ್ಚು ಜನರನ್ನು ಸೇರಿಸಲಾಗಿತ್ತು. ಸುದ್ದಿ ತಿಳಿದ ಕೂಡಲೇ ಪಿಎಸ್ಐ ಶ್ರೀಕಾಂತ್, ಮಾಡಬಾಳ್ ರಾಜಸ್ವ ನಿರೀಕ್ಷಕ ವೆಂಕಟೇಶ್, ಹಂಚಿಕುಪ್ಪೆ ಗ್ರಾಮ ಪಂಚಾಯಿತಿ ಪಿಡಿಒ ಸುರೇಶ್ ಕುಮಾರ್ ನೇತೃತ್ವದ ಅಧಿಕಾರಿಗಳ ತಂಡ ಲಕ್ಷ್ಮೀನರಸಿಂಹಸ್ವಾಮಿ ಕಲ್ಯಾಣ ಮಂಟಪ, ಆರ್.ಎನ್.ಆರ್ ಕಲ್ಯಾಣ ಮಂಟಪ, ಎಸ್ಎಲ್ಎನ್ ಕಲ್ಯಾಣ ಮಂಟಪಗಳಿಗೆ ತೆರಳಿ ತಪಾಸಣೆ ನಡೆಸಿದರು.