<p><strong>ಕನಕಪುರ:</strong> ಕಾಡಿನಿಂದ 40 ಆನೆಗಳ ಹಿಂಡು ನಾಡಿಗೆ ಬಂದಿದೆ ಎಂದು ಭಾನುವಾರ ಬೆಳಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವಿಡಿಯೊ ರೈತರನ್ನು ಭಯಭೀತಗೊಳಿಸಿತ್ತು.</p>.<p>ತಾಲ್ಲೂಕಿನ ಗಡಿ ಗ್ರಾಮವಾದ ಕೋಡಿಹಳ್ಳಿ ಹೋಬಳಿ ಕೊಳಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡುಶಿವನಹಳ್ಳಿ ಗ್ರಾಮದಲ್ಲಿ 40 ಕಾಡಾನೆಗಳು ಬೆಳಗ್ಗೆ ದಿಢೀರ್ ಪ್ರತ್ಯಕ್ಷವಾಗಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.</p>.<p>ಇದರಿಂದ ಆತಂಕಗೊಂಡ ರೈತರು ಭಯದಿಂದ ಕಾಡಾನೆಗಳು ದೊಡ್ಡ ಸಂಖ್ಯೆಯಲ್ಲಿ ತಮ್ಮ ಗ್ರಾಮಗಳ ಸುತ್ತಮುತ್ತ ಬಂದಿವೆ ಎಂದು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಆನೆಗಳನ್ನು ಮತ್ತೆ ಕಾಡಿಗೆ ಓಡಿಸಬೇಕೆಂದು ಒತ್ತಾಯ ಮಾಡಿದರು.</p>.<p>ಅರಣ್ಯ ಅಧಿಕಾರಿಗಳ ತಂಡವು ಕರ್ನಾಟಕದ ಗಡಿ ಉದ್ದಕ್ಕೂ ಸಿಬ್ಬಂದಿಯೊಂದಿಗೆ ಬೆಳಗ್ಗೆಯಿಂದಲೇ ಆನೆಗಳ ಪತ್ತೆಗಾಗಿ ಕಾರ್ಯಾಚರಣೆ ಶುರು ಮಾಡಿತು.</p>.<p>ಆದರೆ ಅವರಿಗೆ ಆನೆಗಳು ಬಂದಿರುವ ಸುಳಿವು ಎಲ್ಲಿಯೂ ಸಿಗದಿದ್ದರಿಂದ ಗೊಂದಲಕ್ಕೆ ಒಳಗಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವಿಡಿಯೊ ಪರಿಶೀಲನೆ ಮಾಡಿದಾಗ ಅದು ಎರಡು ವರ್ಷಗಳ ಹಿಂದಿನ ಹಳೆ ವಿಡಿಯೊ ಎಂದು ಗೊತ್ತಾಗಿದೆ.</p>.<p>ಎರಡು ವರ್ಷಗಳ ಹಿಂದೆ ತಮಿಳುನಾಡಿನಿಂದ ಕರ್ನಾಟಕಕ್ಕೆ 40 ಆನೆಗಳ ಹಿಂಡು ಬಂದಿತ್ತು. ಆ ಸಮಯದಲ್ಲಿ ಮಾಡಿರುವ ವಿಡಿಯೋ ಅದಾಗಿದ್ದು ರೈತರು ಆತಂಕಗೊಳ್ಳಬೇಕಾದ ಅವಶ್ಯಕತೆ ಇಲ್ಲ. ಯಾವ ಆನೆಗಳೂ ಇತ್ತ ಬಂದಿಲ್ಲ ಎಂದು ಅರಣ್ಯ ಅಧಿಕಾರಿಗಳು ರೈತರಿಗೆ ಮನವರಿಕೆ ಮಾಡಿಕೊಟ್ಟು ಸಮಾಧಾನಪಡಿಸಿದರು ಎಂದು ವನ್ಯಜೀವಿ ವಲಯದ ಆರ್ಎಫ್ಒ ನಾಗರಾಜು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ಕಾಡಿನಿಂದ 40 ಆನೆಗಳ ಹಿಂಡು ನಾಡಿಗೆ ಬಂದಿದೆ ಎಂದು ಭಾನುವಾರ ಬೆಳಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವಿಡಿಯೊ ರೈತರನ್ನು ಭಯಭೀತಗೊಳಿಸಿತ್ತು.</p>.<p>ತಾಲ್ಲೂಕಿನ ಗಡಿ ಗ್ರಾಮವಾದ ಕೋಡಿಹಳ್ಳಿ ಹೋಬಳಿ ಕೊಳಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡುಶಿವನಹಳ್ಳಿ ಗ್ರಾಮದಲ್ಲಿ 40 ಕಾಡಾನೆಗಳು ಬೆಳಗ್ಗೆ ದಿಢೀರ್ ಪ್ರತ್ಯಕ್ಷವಾಗಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.</p>.<p>ಇದರಿಂದ ಆತಂಕಗೊಂಡ ರೈತರು ಭಯದಿಂದ ಕಾಡಾನೆಗಳು ದೊಡ್ಡ ಸಂಖ್ಯೆಯಲ್ಲಿ ತಮ್ಮ ಗ್ರಾಮಗಳ ಸುತ್ತಮುತ್ತ ಬಂದಿವೆ ಎಂದು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಆನೆಗಳನ್ನು ಮತ್ತೆ ಕಾಡಿಗೆ ಓಡಿಸಬೇಕೆಂದು ಒತ್ತಾಯ ಮಾಡಿದರು.</p>.<p>ಅರಣ್ಯ ಅಧಿಕಾರಿಗಳ ತಂಡವು ಕರ್ನಾಟಕದ ಗಡಿ ಉದ್ದಕ್ಕೂ ಸಿಬ್ಬಂದಿಯೊಂದಿಗೆ ಬೆಳಗ್ಗೆಯಿಂದಲೇ ಆನೆಗಳ ಪತ್ತೆಗಾಗಿ ಕಾರ್ಯಾಚರಣೆ ಶುರು ಮಾಡಿತು.</p>.<p>ಆದರೆ ಅವರಿಗೆ ಆನೆಗಳು ಬಂದಿರುವ ಸುಳಿವು ಎಲ್ಲಿಯೂ ಸಿಗದಿದ್ದರಿಂದ ಗೊಂದಲಕ್ಕೆ ಒಳಗಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವಿಡಿಯೊ ಪರಿಶೀಲನೆ ಮಾಡಿದಾಗ ಅದು ಎರಡು ವರ್ಷಗಳ ಹಿಂದಿನ ಹಳೆ ವಿಡಿಯೊ ಎಂದು ಗೊತ್ತಾಗಿದೆ.</p>.<p>ಎರಡು ವರ್ಷಗಳ ಹಿಂದೆ ತಮಿಳುನಾಡಿನಿಂದ ಕರ್ನಾಟಕಕ್ಕೆ 40 ಆನೆಗಳ ಹಿಂಡು ಬಂದಿತ್ತು. ಆ ಸಮಯದಲ್ಲಿ ಮಾಡಿರುವ ವಿಡಿಯೋ ಅದಾಗಿದ್ದು ರೈತರು ಆತಂಕಗೊಳ್ಳಬೇಕಾದ ಅವಶ್ಯಕತೆ ಇಲ್ಲ. ಯಾವ ಆನೆಗಳೂ ಇತ್ತ ಬಂದಿಲ್ಲ ಎಂದು ಅರಣ್ಯ ಅಧಿಕಾರಿಗಳು ರೈತರಿಗೆ ಮನವರಿಕೆ ಮಾಡಿಕೊಟ್ಟು ಸಮಾಧಾನಪಡಿಸಿದರು ಎಂದು ವನ್ಯಜೀವಿ ವಲಯದ ಆರ್ಎಫ್ಒ ನಾಗರಾಜು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>