‘ರೆಸಾರ್ಟಿನಲ್ಲಿ ಹಲ್ಲೆ ನಡೆದ ಬಳಿಕ ನಮಗೆ ಯಾವುದೇ ದೂರು ಬಂದಿರಲಿಲ್ಲ. ಆಸ್ಪತ್ರೆಯಿಂದ ಎಂಎಲ್ಸಿ ಬಂದ ನಂತರವಷ್ಟೇ ಅಲ್ಲಿಗೆ ಸ್ಥಳೀಯ ಪೊಲೀಸರನ್ನು ಕಳುಹಿಸಿ ಹೇಳಿಕೆ ಪಡೆಯಲಾಯಿತು. ಹೀಗಾಗಿ ಆರಂಭದಲ್ಲಿಯೇ ಆರೋಪಿಯನ್ನು ಬಂಧಿಸುವುದು ಸಾಧ್ಯವಾಗಲಿಲ್ಲ. ಪ್ರಕರಣದ ತನಿಖೆ ವಿಚಾರದಲ್ಲಿ ಯಾವುದೇ ರಾಜಕೀಯ ಒತ್ತಡ ಬಂದಿಲ್ಲ. ಸ್ವತಂತ್ರವಾಗಿ ತನಿಖೆ ನಡೆದಿದೆ’ ಎಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ರಮೇಶ್ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.