ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ರಾಮನಗರ | ಡಿ.ಸಿ ವಿರುದ್ಧ ಆಕ್ರೋಶ; ಹೋರಾಟಗಾರರು ಪೊಲೀಸ್ ವಶಕ್ಕೆ

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಿಷೇಧಕ್ಕೆ ವಿರೋಧ; ಹೋರಾಟಗಾರರಿಂದ ರಸ್ತೆ ತಡೆ
Published : 10 ಸೆಪ್ಟೆಂಬರ್ 2024, 6:29 IST
Last Updated : 10 ಸೆಪ್ಟೆಂಬರ್ 2024, 6:29 IST
ಫಾಲೋ ಮಾಡಿ
Comments
ಸುರಿಯುವ ಮಳೆಯನ್ನೂ ಲೆಕ್ಕಿಸದೆ ಧರಣಿ ನಡೆಸುತ್ತಿದ್ದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದರು
ಸುರಿಯುವ ಮಳೆಯನ್ನೂ ಲೆಕ್ಕಿಸದೆ ಧರಣಿ ನಡೆಸುತ್ತಿದ್ದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದರು
ಧರಣಿನಿರತ ಹೋರಾಟಗಾರರನ್ನು ಪೊಲೀಸರು ಮಳೆಯಲ್ಲೇ ವಶಕ್ಕೆ ಪಡೆದು ಪೊಲೀಸ್ ವಾಹನಕ್ಕೆ ತುಂಬಿಸಿದರು
ಧರಣಿನಿರತ ಹೋರಾಟಗಾರರನ್ನು ಪೊಲೀಸರು ಮಳೆಯಲ್ಲೇ ವಶಕ್ಕೆ ಪಡೆದು ಪೊಲೀಸ್ ವಾಹನಕ್ಕೆ ತುಂಬಿಸಿದರು
ಶೌಚಕ್ಕೂ ಬಿಡದ ಪೊಲೀಸರು; ವಾಗ್ವಾದ
ಧರಣಿನಿರತ ಮಹಿಳಾ ಹೋರಾಟಗಾರರು ಶೌಚಾಲಯಕ್ಕೆ ಹೋಗಲು ಪೊಲೀಸರು ಅವಕಾಶ ನೀಡಬೇಕು ಎಂದು ಮುಖಂಡರು ಪೊಲೀಸರಿಗೆ ಮನವಿ ಮಾಡಿದರು. ಅದಕ್ಕೆ ಪೊಲೀಸರು ನಿರಾಕರಿಸಿದಾಗ ಬಲವಂತವಾಗಿ ಒಳಕ್ಕೆ ಹೋಗಲು ಯತ್ನಿಸಿದರು. ಆಗ ಪೊಲೀಸರು ಮತ್ತು ಹೋರಾಟಗಾರರ ನಡುವೆ ವಾಗ್ವಾದ ನಡೆಯಿತು. ಆಗ ಹೋರಾಟಗಾರರು ಪೊಲೀಸರ ವಿರುದ್ಧವೂ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಇಂದು ಉಸ್ತುವಾರಿ ಸಚಿವರ ಭೇಟಿ ತಮ್ಮನ್ನು ವಶಕ್ಕೆ ಪಡೆದು ಇಟ್ಟಿದ್ದ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿದ ಹೋರಾಟಗಾರರು ಜಿಲ್ಲಾಧಿಕಾರಿ ನಡೆ ವಿರೋಧಿಸಿ ಮಂಗಳವಾರ ಬೆಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ. ‘ನಿಷೇಧಾಜ್ಞೆ ಆದೇಶ ಹಿಂಪಡೆಯುವುದು ಡಿಸಿ ವರ್ಗಾವಣೆ ಹಾಗೂ ರೈತರ 32 ಬೇಡಿಕೆಗಳ ಈಡೇರಿಕೆಗೆ ಸಚಿವರಲ್ಲಿ ಮನವಿ ಮಾಡಲಾಗುವುದು. ಪೂರಕವಾಗಿ ಸ್ಪಂದಿಸದಿದ್ದರೆ ಮತ್ತೆ ಧರಣಿ ಮುಂದುವರಿಸಲಾಗುವುದು’ ಎಂದು ಜಯ ಕರ್ನಾಟಕ ಜನಪರ ವೇದಿಕೆಯ ಸಲಹೆಗಾರ ಕುಮಾರಸ್ವಾಮಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT