ಸುರಿಯುವ ಮಳೆಯನ್ನೂ ಲೆಕ್ಕಿಸದೆ ಧರಣಿ ನಡೆಸುತ್ತಿದ್ದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದರು
ಧರಣಿನಿರತ ಹೋರಾಟಗಾರರನ್ನು ಪೊಲೀಸರು ಮಳೆಯಲ್ಲೇ ವಶಕ್ಕೆ ಪಡೆದು ಪೊಲೀಸ್ ವಾಹನಕ್ಕೆ ತುಂಬಿಸಿದರು
ಶೌಚಕ್ಕೂ ಬಿಡದ ಪೊಲೀಸರು; ವಾಗ್ವಾದ
ಧರಣಿನಿರತ ಮಹಿಳಾ ಹೋರಾಟಗಾರರು ಶೌಚಾಲಯಕ್ಕೆ ಹೋಗಲು ಪೊಲೀಸರು ಅವಕಾಶ ನೀಡಬೇಕು ಎಂದು ಮುಖಂಡರು ಪೊಲೀಸರಿಗೆ ಮನವಿ ಮಾಡಿದರು. ಅದಕ್ಕೆ ಪೊಲೀಸರು ನಿರಾಕರಿಸಿದಾಗ ಬಲವಂತವಾಗಿ ಒಳಕ್ಕೆ ಹೋಗಲು ಯತ್ನಿಸಿದರು. ಆಗ ಪೊಲೀಸರು ಮತ್ತು ಹೋರಾಟಗಾರರ ನಡುವೆ ವಾಗ್ವಾದ ನಡೆಯಿತು. ಆಗ ಹೋರಾಟಗಾರರು ಪೊಲೀಸರ ವಿರುದ್ಧವೂ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಇಂದು ಉಸ್ತುವಾರಿ ಸಚಿವರ ಭೇಟಿ ತಮ್ಮನ್ನು ವಶಕ್ಕೆ ಪಡೆದು ಇಟ್ಟಿದ್ದ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿದ ಹೋರಾಟಗಾರರು ಜಿಲ್ಲಾಧಿಕಾರಿ ನಡೆ ವಿರೋಧಿಸಿ ಮಂಗಳವಾರ ಬೆಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ. ‘ನಿಷೇಧಾಜ್ಞೆ ಆದೇಶ ಹಿಂಪಡೆಯುವುದು ಡಿಸಿ ವರ್ಗಾವಣೆ ಹಾಗೂ ರೈತರ 32 ಬೇಡಿಕೆಗಳ ಈಡೇರಿಕೆಗೆ ಸಚಿವರಲ್ಲಿ ಮನವಿ ಮಾಡಲಾಗುವುದು. ಪೂರಕವಾಗಿ ಸ್ಪಂದಿಸದಿದ್ದರೆ ಮತ್ತೆ ಧರಣಿ ಮುಂದುವರಿಸಲಾಗುವುದು’ ಎಂದು ಜಯ ಕರ್ನಾಟಕ ಜನಪರ ವೇದಿಕೆಯ ಸಲಹೆಗಾರ ಕುಮಾರಸ್ವಾಮಿ ತಿಳಿಸಿದರು.