<p><strong>ಬಿಡದಿ/ರಾಮನಗರ:</strong> ‘ರಾಜ್ಯ ಸರ್ಕಾರ ಅಭಿವೃದ್ಧಿ ಹೆಸರಿನಲ್ಲಿ ಉಚಿತವಾಗಿ ಕೆಲ ಯೋಜನೆಗಳನ್ನು ಜಾರಿ ಮಾಡಿ ಅದರ ಹೊರೆಯನ್ನು ಸಾರಿಗೆ ಇಲಾಖೆ ಮೇಲೆ ಹೊರಿಸಿದೆ. ಹೀಗಿರುವಾಗ ಇಲಾಖೆಗೆ ನಷ್ಟವಾಗದೇ ಏನು ಲಾಭವಾಗುತ್ತಾ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.</p>.<p>ಬಿಡದಿಯ ತಮ್ಮ ತೋಟದ ಮನೆಯಲ್ಲಿ ಸೋಮವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ನಾನು 2006-07 ರಲ್ಲಿ ಮುಖ್ಯಮಂತ್ರಿ ಆಗಿದ್ದ ವೇಳೆ ಸಾರಿಗೆ ಇಲಾಖೆಯಲ್ಲಿ ಹಣವನ್ನು ಠೇವಣಿ ಇಟ್ಟಿದ್ದೆ. ಆದರೆ ಈ ಸರ್ಕಾರದಲ್ಲಿ ಹಣ ಇಲ್ಲ ಅಂದರೆ ಹೇಗೆ?’ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>‘ಸರ್ಕಾರದ ತಪ್ಪು ಇಟ್ಟುಕೊಂಡು ಚಾಲಕ, ನಿರ್ವಾಹಕರ ಮೇಲೆ ದಬ್ಬಾಳಿಕೆ ಮಾಡುವುದು ಸರಿಯಲ್ಲ. ಈ ಸರ್ಕಾರದ ಯೋಗ್ಯತೆಗೆ ಸಾರಿಗೆ ಇಲಾಖೆ ನೌಕರರಿಗೆ ಸಂಬಳ ಕೊಡಲು ಸಾಧ್ಯವಾಗಿಲ್ಲ. ಇವರು ಎಲ್ಲಿ ಹಣವನ್ನ ಪೋಲು ಮಾಡುತ್ತಿದ್ದಾರೆ ಅಂತಾ ರಾಜ್ಯದ ಜನತೆಗೆ ಗೊತ್ತಿಲ್ವಾ’ ಎಂದು ವ್ಯಂಗ್ಯವಾಗಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಡದಿ/ರಾಮನಗರ:</strong> ‘ರಾಜ್ಯ ಸರ್ಕಾರ ಅಭಿವೃದ್ಧಿ ಹೆಸರಿನಲ್ಲಿ ಉಚಿತವಾಗಿ ಕೆಲ ಯೋಜನೆಗಳನ್ನು ಜಾರಿ ಮಾಡಿ ಅದರ ಹೊರೆಯನ್ನು ಸಾರಿಗೆ ಇಲಾಖೆ ಮೇಲೆ ಹೊರಿಸಿದೆ. ಹೀಗಿರುವಾಗ ಇಲಾಖೆಗೆ ನಷ್ಟವಾಗದೇ ಏನು ಲಾಭವಾಗುತ್ತಾ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.</p>.<p>ಬಿಡದಿಯ ತಮ್ಮ ತೋಟದ ಮನೆಯಲ್ಲಿ ಸೋಮವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ನಾನು 2006-07 ರಲ್ಲಿ ಮುಖ್ಯಮಂತ್ರಿ ಆಗಿದ್ದ ವೇಳೆ ಸಾರಿಗೆ ಇಲಾಖೆಯಲ್ಲಿ ಹಣವನ್ನು ಠೇವಣಿ ಇಟ್ಟಿದ್ದೆ. ಆದರೆ ಈ ಸರ್ಕಾರದಲ್ಲಿ ಹಣ ಇಲ್ಲ ಅಂದರೆ ಹೇಗೆ?’ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>‘ಸರ್ಕಾರದ ತಪ್ಪು ಇಟ್ಟುಕೊಂಡು ಚಾಲಕ, ನಿರ್ವಾಹಕರ ಮೇಲೆ ದಬ್ಬಾಳಿಕೆ ಮಾಡುವುದು ಸರಿಯಲ್ಲ. ಈ ಸರ್ಕಾರದ ಯೋಗ್ಯತೆಗೆ ಸಾರಿಗೆ ಇಲಾಖೆ ನೌಕರರಿಗೆ ಸಂಬಳ ಕೊಡಲು ಸಾಧ್ಯವಾಗಿಲ್ಲ. ಇವರು ಎಲ್ಲಿ ಹಣವನ್ನ ಪೋಲು ಮಾಡುತ್ತಿದ್ದಾರೆ ಅಂತಾ ರಾಜ್ಯದ ಜನತೆಗೆ ಗೊತ್ತಿಲ್ವಾ’ ಎಂದು ವ್ಯಂಗ್ಯವಾಗಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>