‘ನಮಗೆ ಜಾಗ ಕೊಡುವುದಾಗಿ ಹೇಳುವ ಸರ್ಕಾರ ನಮ್ಮನ್ನು ಸತಾಯಿಸದೆ ಭೂಮಿ ಕೊಡಬೇಕು. ಇಲ್ಲವಾದಲ್ಲಿ ಭೂಮಿ ಕೊಡುವುದಿಲ್ಲವೆಂದು ಹೇಳಬೇಕು. ಸುಮ್ಮನೆ ಪ್ರತಿ ಬಾರಿಯೂ ಹೊಸದಾಗಿ ಪರಿಶೀಲನೆ ಮಾಡುವುದಾಗಿ ಹೇಳಿ ನಮ್ಮನ್ನು ವಂಚಿಸುತ್ತಿದ್ದಾರೆ. ನಮಗೆ ಯಾವುದೇ ಪರಿಶೀಲನೆ ಬೇಕಿಲ್ಲ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ, ಅರಣ್ಯವಾಸಿಗಳ ಅರಣ್ಯ ಹಕ್ಕು ಕಾಯ್ದೆಯಡಿ ನಮ್ಮ 93 ಅರ್ಜಿದಾರರಿಗೂ ಭೂಮಿ ಕೊಡಬೇಕು’ ಎಂದು ಆಗ್ರಹಿಸಿದರು.