ಚನ್ನಪಟ್ಟಣ: ಪಟ್ಟಣದ ಕಾರ್ಮಿಕ ಇಲಾಖೆ ಕಚೇರಿ ಕಟ್ಟಡದಲ್ಲಿ ಶನಿವಾರ ನೀಡಿದ ದಿನಸಿ ಕಿಟ್ ಗಳಿಗೆ ಕಾರ್ಮಿಕರು ಕೊರೊನಾ ಲೆಕ್ಕಿಸದೆ ಮುಗಿಬಿದ್ದರು.
ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದೆ.
ಇಲಾಖೆ ವತಿಯಿಂದ ಸುಮಾರು 15 ಸಾವಿರ ಮಂದಿ ಕಾರ್ಮಿಕರಿಗೆ ದಿನಸಿ ಕಿಟ್ ಗಳನ್ನು ವಿತರಿಸಲಾಗುತ್ತಿದ್ದು, ತಾಲ್ಲೂಕಿನಲ್ಲಿ 8 ಸಾವಿರ ಮಂದಿ ನೋಂದಾಯಿತ ಕಾರ್ಮಿಕರು ಇದ್ದು, ಉಳಿದವರು ಅಸಘಂಟಿತರಾಗಿದ್ದಾರೆ ಎಂದು ಇಲಾಖೆ ತಿಳಿಸಿದೆ.
ಇಲಾಖೆ ಶನಿವಾರ ಮಹೇಶ್ವರ ಕಲ್ಯಾಣ ಮಂಟಪದಲ್ಲಿ ಕಿಟ್ ನೀಡುತ್ತಿದ್ದು, ಕಾರ್ಮಿಕರು ಯಾವುದೇ ರೀತಿಯ ಕೊರೊನಾ ಮುನ್ನೆಚ್ಚರಿಕೆ ವಹಿಸದೆ ನಾಮುಂದು ತಾಮುಂದು ಎಂದು ಕಿಟ್ ಪಡೆದುಕೊಳ್ಳಲು ಮುಗಿಬಿದ್ದಿದ್ದರು. ಬೆರಣಿಕೆಯಷ್ಟಿದ್ದ ಇಲಾಖೆಯ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿ ಇದನ್ನು ಕಂಡೂ ಕಾಣದಂತೆ ಮೌನ ವಹಿಸಿದ್ದರು.