<p><strong>ರಾಮನಗರ:</strong> ಜಿಲ್ಲಾ ಆರನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪ್ರೊ. ಶಿವನಂಜಯ್ಯ ಅವರ ಬೆನ್ನಿಗೆ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ನಿಂತಿದೆ. ಯಾವುದೇ ಕಾರಣಕ್ಕೂ ಅಧ್ಯಕ್ಷರನ್ನು ಬದಲಿಸದೇ ಇರುವ ತೀರ್ಮಾನ ಕೈಗೊಂಡಿದೆ.</p>.<p>ಸಮ್ಮೇಳನವು ಇದೇ 23, 24ರಂದು ರಾಮನಗರದಲ್ಲಿ ನಡೆಯಲಿದೆ. ಅಧ್ಯಕ್ಷರನ್ನು ಬದಲಿಸುವಂತೆ ಕೋರಿ ಹಿಂದೂ ಜಾಗರಣಾ ವೇದಿಕೆಯು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತ್ತು. ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಸಿಂ.ಲಿಂ. ನಾಗರಾಜು ‘ಜನಾಭಿಪ್ರಾಯ ಒಗ್ಗೂಡಿಸಿಯೇ ಶಿವನಂಜಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ’ ಎಂದು ಸ್ಪಷ್ಟಪಡಿಸಿದರು.</p>.<p>‘ಶಿವನಂಜಯ್ಯ ಅವರೊಬ್ಬ ಹಿರಿಯ ವಿಚಾರವಾದಿ. ದಶಕಗಳಿಂದ ಅವರನ್ನು ಬಲ್ಲೆ. ಅವರ ಬರಹಗಳನ್ನೂ ಓದಿದ್ದೇನೆ. ಅವರು ವೈಚಾರಿಕವಾಗಿ ಮಾತನಾಡುತ್ತಾರೆಯೇ ಹೊರತು ಎಂದೂ ಧರ್ಮ ವಿರೋಧಿ ಯೋಚನೆ ಮಾಡಿದವರಲ್ಲ. ಅವರ ನಿಲವನ್ನು ಪ್ರಶ್ನಿಸುವವರು ನನ್ನ ಬಳಿ ಬಂದರೆ ಆ ಬಗ್ಗೆ ತಿಳಿವಳಿಕೆ ನೀಡುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಜಿಲ್ಲಾ ಆರನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪ್ರೊ. ಶಿವನಂಜಯ್ಯ ಅವರ ಬೆನ್ನಿಗೆ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ನಿಂತಿದೆ. ಯಾವುದೇ ಕಾರಣಕ್ಕೂ ಅಧ್ಯಕ್ಷರನ್ನು ಬದಲಿಸದೇ ಇರುವ ತೀರ್ಮಾನ ಕೈಗೊಂಡಿದೆ.</p>.<p>ಸಮ್ಮೇಳನವು ಇದೇ 23, 24ರಂದು ರಾಮನಗರದಲ್ಲಿ ನಡೆಯಲಿದೆ. ಅಧ್ಯಕ್ಷರನ್ನು ಬದಲಿಸುವಂತೆ ಕೋರಿ ಹಿಂದೂ ಜಾಗರಣಾ ವೇದಿಕೆಯು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತ್ತು. ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಸಿಂ.ಲಿಂ. ನಾಗರಾಜು ‘ಜನಾಭಿಪ್ರಾಯ ಒಗ್ಗೂಡಿಸಿಯೇ ಶಿವನಂಜಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ’ ಎಂದು ಸ್ಪಷ್ಟಪಡಿಸಿದರು.</p>.<p>‘ಶಿವನಂಜಯ್ಯ ಅವರೊಬ್ಬ ಹಿರಿಯ ವಿಚಾರವಾದಿ. ದಶಕಗಳಿಂದ ಅವರನ್ನು ಬಲ್ಲೆ. ಅವರ ಬರಹಗಳನ್ನೂ ಓದಿದ್ದೇನೆ. ಅವರು ವೈಚಾರಿಕವಾಗಿ ಮಾತನಾಡುತ್ತಾರೆಯೇ ಹೊರತು ಎಂದೂ ಧರ್ಮ ವಿರೋಧಿ ಯೋಚನೆ ಮಾಡಿದವರಲ್ಲ. ಅವರ ನಿಲವನ್ನು ಪ್ರಶ್ನಿಸುವವರು ನನ್ನ ಬಳಿ ಬಂದರೆ ಆ ಬಗ್ಗೆ ತಿಳಿವಳಿಕೆ ನೀಡುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>