‘ಬಹುತೇಕ ಬಡ ರೋಗಿಗಳು ಹಾಗೂ ಅವರ ಕಡೆಯವರು ಬರುವ ಆಸ್ಪತ್ರೆ ಆವರಣದಲ್ಲಿ ವಾಹನಗಳ ನಿಲುಗಡೆ ಶುಲ್ಕವನ್ನು ಎಲ್ಲರ ಕೈಗೆಟುಕುವಂತೆ ನಿಗದಿಪಡಿಸಲಾಗಿತ್ತು. ಆದರೆ, ಗುತ್ತಿಗೆದಾರ ನಮ್ಮ ಗಮನಕ್ಕೆ ತರದೆ ಏಕಾಏಕಿ ಶುಲ್ಕ ಹೆಚ್ಚಳ ಮಾಡಿದ್ದರು. ವರದಿ ಗಮನಿಸಿದ ಬಳಿಕ, ಟೆಂಡರ್ ಷರತ್ತು ಉಲ್ಲಂಘನೆ ಮಾಡಿರುವ ಬಗ್ಗೆ ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದ್ದು, ಇದೀಗ ನಿಗದಿತ ಶುಲ್ಕ ವಸೂಲಿ ಮಾಡುತ್ತಿದ್ದಾರೆ’ ಎಂದು ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ. ಪದ್ಮಾ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.