<p><strong>ಮಾಗಡಿ:</strong> ತಾಲ್ಲೂಕಿನ ಗುಮ್ಮಸಂದ್ರ ರುದ್ರಮುನೀಶ್ವರ ಮಠದ ನೂತನ ಉತ್ತರಾಧಿಕಾರಿಯನ್ನಾಗಿ ಓಂಕಾರ ಸ್ವಾಮೀಜಿಯನ್ನು ನೇಮಕ ಮಾಡಲಾಗಿದೆ. </p>.<p>ವಿವಿಧ ಮಠಾಧೀಶರ ಸಮ್ಮುಖದಲ್ಲಿ ಗುರುವಾರ ಮಠದಲ್ಲಿ ಓಂಕಾರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ ನಡೆಯಿತು. ರುದ್ರಮುನೇಶ್ವರ ಮಠದ ಚಂದ್ರಶೇಖರ ಸ್ವಾಮೀಜಿ ತಮ್ಮ ಉತ್ತರಾಧಿಕಾರಿಯ ಪಟ್ಟಾಭಿಷೇಕ ಮಾಡಿದರು. </p>.<p>ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ನೊಣವಿನಕೆರೆ ವೃಷಭ ಶಿವಯೋಗಿಶ್ವರ ಸ್ವಾಮೀಜಿ ಸೇರಿದಂತೆ ನಾಡಿನ ವಿವಿಧ ಮಠಾಧೀಶರು ಭಾಗವಹಿಸಿದ್ದರು.</p>.<p>ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಮಠದ ಕಾರ್ಯಭಾರ ನಿರ್ವಹಿಸಲು ಉತ್ತರಾಧಿಕಾರಿ ನೇಮಕ ಮಾಡುವ ಕುರಿತು ಭಕ್ತರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಯಿತು. ಸಿದ್ಧಗಂಗಾ ಮಠಾಧ್ಯಕ್ಷರ ಸಲಹೆ ಮೇರೆಗೆ ಓಂಕಾರ ಸ್ವಾಮೀಜಿಯನ್ನು ಉತ್ತರಾಧಿಕಾರಿ ಆಯ್ಕೆ ಮಾಡಲಾಯಿತು ಎಂದು ರುದ್ರಮುನೇಶ್ವರ ಚಂದ್ರಶೇಖರ ಸ್ವಾಮೀಜಿ ಹೇಳಿದರು.</p>.<p>ಸೂಕ್ತ ಉತ್ತರಾಧಿಕಾರಿಗಾಗಿ ಒಂದು ವರ್ಷದಿಂದ ಹುಡುಕಾಟ ನಡೆದಿತ್ತು. ಕಣ್ಣೂರು ಗ್ರಾಮದ ಸಿದ್ದಲಿಂಗಮೂರ್ತಿ ಮತ್ತು ರೇಣುಕಾ ದಂಪತಿ ಎರಡನೇ ಪುತ್ರ ಸಂದೀಪ್ ದೇವರು ಮಠದ ಉತ್ತರಾಧಿಕಾರಿಯಾಗಲು ಸೂಕ್ತ ಎಂದು ತೀರ್ಮಾನಿಸಿ ಕುಟುಂಬವನ್ನು ಸಂಪರ್ಕಿಸಲಾಯಿತು ಎಂದು ಅವರು ಹೇಳಿದರು.</p>.<p>ಸಿದ್ದಗಂಗಾ ಮಠದಲ್ಲಿ ಎಂಟನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಸಂದೀಪ್ ದೇವರನ್ನು ಮಠದ ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಲು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಕೂಡ ಒಪ್ಪಿಗೆ ಸೂಚಿಸಿದರು. ಭಕ್ತರೊಂದಿಗೆ ಚಿರ್ಚಿಸಿ ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಲಾಯಿತು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ:</strong> ತಾಲ್ಲೂಕಿನ ಗುಮ್ಮಸಂದ್ರ ರುದ್ರಮುನೀಶ್ವರ ಮಠದ ನೂತನ ಉತ್ತರಾಧಿಕಾರಿಯನ್ನಾಗಿ ಓಂಕಾರ ಸ್ವಾಮೀಜಿಯನ್ನು ನೇಮಕ ಮಾಡಲಾಗಿದೆ. </p>.<p>ವಿವಿಧ ಮಠಾಧೀಶರ ಸಮ್ಮುಖದಲ್ಲಿ ಗುರುವಾರ ಮಠದಲ್ಲಿ ಓಂಕಾರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ ನಡೆಯಿತು. ರುದ್ರಮುನೇಶ್ವರ ಮಠದ ಚಂದ್ರಶೇಖರ ಸ್ವಾಮೀಜಿ ತಮ್ಮ ಉತ್ತರಾಧಿಕಾರಿಯ ಪಟ್ಟಾಭಿಷೇಕ ಮಾಡಿದರು. </p>.<p>ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ನೊಣವಿನಕೆರೆ ವೃಷಭ ಶಿವಯೋಗಿಶ್ವರ ಸ್ವಾಮೀಜಿ ಸೇರಿದಂತೆ ನಾಡಿನ ವಿವಿಧ ಮಠಾಧೀಶರು ಭಾಗವಹಿಸಿದ್ದರು.</p>.<p>ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಮಠದ ಕಾರ್ಯಭಾರ ನಿರ್ವಹಿಸಲು ಉತ್ತರಾಧಿಕಾರಿ ನೇಮಕ ಮಾಡುವ ಕುರಿತು ಭಕ್ತರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಯಿತು. ಸಿದ್ಧಗಂಗಾ ಮಠಾಧ್ಯಕ್ಷರ ಸಲಹೆ ಮೇರೆಗೆ ಓಂಕಾರ ಸ್ವಾಮೀಜಿಯನ್ನು ಉತ್ತರಾಧಿಕಾರಿ ಆಯ್ಕೆ ಮಾಡಲಾಯಿತು ಎಂದು ರುದ್ರಮುನೇಶ್ವರ ಚಂದ್ರಶೇಖರ ಸ್ವಾಮೀಜಿ ಹೇಳಿದರು.</p>.<p>ಸೂಕ್ತ ಉತ್ತರಾಧಿಕಾರಿಗಾಗಿ ಒಂದು ವರ್ಷದಿಂದ ಹುಡುಕಾಟ ನಡೆದಿತ್ತು. ಕಣ್ಣೂರು ಗ್ರಾಮದ ಸಿದ್ದಲಿಂಗಮೂರ್ತಿ ಮತ್ತು ರೇಣುಕಾ ದಂಪತಿ ಎರಡನೇ ಪುತ್ರ ಸಂದೀಪ್ ದೇವರು ಮಠದ ಉತ್ತರಾಧಿಕಾರಿಯಾಗಲು ಸೂಕ್ತ ಎಂದು ತೀರ್ಮಾನಿಸಿ ಕುಟುಂಬವನ್ನು ಸಂಪರ್ಕಿಸಲಾಯಿತು ಎಂದು ಅವರು ಹೇಳಿದರು.</p>.<p>ಸಿದ್ದಗಂಗಾ ಮಠದಲ್ಲಿ ಎಂಟನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಸಂದೀಪ್ ದೇವರನ್ನು ಮಠದ ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಲು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಕೂಡ ಒಪ್ಪಿಗೆ ಸೂಚಿಸಿದರು. ಭಕ್ತರೊಂದಿಗೆ ಚಿರ್ಚಿಸಿ ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಲಾಯಿತು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>