<p><strong>ಹಾರೋಹಳ್ಳಿ</strong>: ರಾಜ್ಯಮಟ್ಟದ ಅಥ್ಲೆಟಿಕ್ಸ್ ವಿಭಾಗದಲ್ಲಿ 100 ಮೀಟರ್ ಹಾಗೂ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ಗಮನ ಸೆಳೆದ ಪವನ್ ಕಲ್ಯಾಣ್ ಅಪ್ಪಟ ಗ್ರಾಮೀಣ ಪ್ರತಿಭೆ. </p>.<p>ತಾಲ್ಲೂಕಿನ ರಾವುಗೊಡ್ಲು ಗ್ರಾಮದ ಈ ಬಾಲಕ ಹಾರೋಹಳ್ಳಿ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿ. </p>.<p>2022ರಲ್ಲಿ ಮೈಸೂರು ಹಾಗೂ 2023ರಲ್ಲಿ ಉಡುಪಿಯಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಆಯ್ಕೆಯಾಗಿ ಉತ್ತಮ ಸಾಧನೆ ತೋರಿದ್ದಾನೆ. </p>.<p>ಬಾಲ್ಯದಲ್ಲೇ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದ ಪವನ್, ಶಾಲೆಯಲ್ಲಿ ನಡೆಯುವ ಕ್ರೀಡಾ ಚಟುವಟಿಕೆಗಳಲ್ಲಿ ಸದಾ ಮುಂದೆ.ದೈಹಿಕ ಶಿಕ್ಷಣ ಶಿಕ್ಷಕ ಸೂರ್ಯಪ್ರಕಾಶ್ ಮಾರ್ಗದರ್ಶನದಲ್ಲಿ ಅಥ್ಲೆಟಿಕ್ಸ್ ಅಭ್ಯಾಸ ಮಾಡುತ್ತಿದ್ದಾನೆ. ಎರಡು ಬಾರಿ ಜಿಲ್ಲಾಮಟ್ಟದ ಓಟದ ಸ್ಪರ್ಧೆಯಲ್ಲಿ ಗೆದ್ದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. </p>.<p>ಪೋಷಕರಾದ ಮಂಜುನಾಥ್ ಮತ್ತು ಲಕ್ಷ್ಮಿದಂಪತಿ ಬೇರೆಯವರ ತೋಟದಲ್ಲಿ ಕೆಲಸ ಮಾಡಿ ಮಕ್ಕಳನ್ನು ಓದಿಸುತ್ತಿದ್ದಾರೆ. ‘ನಾನು ಕೂಡಾ ಇತರ ಕ್ರೀಡಾಪಟುಗಳ ರೀತಿ ಸಾಧನೆ ಮಾಡಬೇಕೆಂಬ ಆಸೆಯಿಂದ ಕ್ರೀಡೆಯತ್ತ ಆಕರ್ಷಿತನಾದೆ. ಮುಂದೆ ಕಬಡ್ಡಿ ಆಟಗಾರನಾಗಬೇಕು ಎಂಬ ಗುರಿ ಇದೆ’ ಎನ್ನುತ್ತಾನೆ ಪವನ್ ಕಲ್ಯಾಣ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾರೋಹಳ್ಳಿ</strong>: ರಾಜ್ಯಮಟ್ಟದ ಅಥ್ಲೆಟಿಕ್ಸ್ ವಿಭಾಗದಲ್ಲಿ 100 ಮೀಟರ್ ಹಾಗೂ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ಗಮನ ಸೆಳೆದ ಪವನ್ ಕಲ್ಯಾಣ್ ಅಪ್ಪಟ ಗ್ರಾಮೀಣ ಪ್ರತಿಭೆ. </p>.<p>ತಾಲ್ಲೂಕಿನ ರಾವುಗೊಡ್ಲು ಗ್ರಾಮದ ಈ ಬಾಲಕ ಹಾರೋಹಳ್ಳಿ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿ. </p>.<p>2022ರಲ್ಲಿ ಮೈಸೂರು ಹಾಗೂ 2023ರಲ್ಲಿ ಉಡುಪಿಯಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಆಯ್ಕೆಯಾಗಿ ಉತ್ತಮ ಸಾಧನೆ ತೋರಿದ್ದಾನೆ. </p>.<p>ಬಾಲ್ಯದಲ್ಲೇ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದ ಪವನ್, ಶಾಲೆಯಲ್ಲಿ ನಡೆಯುವ ಕ್ರೀಡಾ ಚಟುವಟಿಕೆಗಳಲ್ಲಿ ಸದಾ ಮುಂದೆ.ದೈಹಿಕ ಶಿಕ್ಷಣ ಶಿಕ್ಷಕ ಸೂರ್ಯಪ್ರಕಾಶ್ ಮಾರ್ಗದರ್ಶನದಲ್ಲಿ ಅಥ್ಲೆಟಿಕ್ಸ್ ಅಭ್ಯಾಸ ಮಾಡುತ್ತಿದ್ದಾನೆ. ಎರಡು ಬಾರಿ ಜಿಲ್ಲಾಮಟ್ಟದ ಓಟದ ಸ್ಪರ್ಧೆಯಲ್ಲಿ ಗೆದ್ದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. </p>.<p>ಪೋಷಕರಾದ ಮಂಜುನಾಥ್ ಮತ್ತು ಲಕ್ಷ್ಮಿದಂಪತಿ ಬೇರೆಯವರ ತೋಟದಲ್ಲಿ ಕೆಲಸ ಮಾಡಿ ಮಕ್ಕಳನ್ನು ಓದಿಸುತ್ತಿದ್ದಾರೆ. ‘ನಾನು ಕೂಡಾ ಇತರ ಕ್ರೀಡಾಪಟುಗಳ ರೀತಿ ಸಾಧನೆ ಮಾಡಬೇಕೆಂಬ ಆಸೆಯಿಂದ ಕ್ರೀಡೆಯತ್ತ ಆಕರ್ಷಿತನಾದೆ. ಮುಂದೆ ಕಬಡ್ಡಿ ಆಟಗಾರನಾಗಬೇಕು ಎಂಬ ಗುರಿ ಇದೆ’ ಎನ್ನುತ್ತಾನೆ ಪವನ್ ಕಲ್ಯಾಣ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>