ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕಪುರ | ಪೌರ ಕಾರ್ಮಿಕರು ಮಲ ಸುರಿದುಕೊಂಡ ಪ್ರಕರಣ: ಪಿಡಿಒ ಅಮಾನತು

Published 25 ಆಗಸ್ಟ್ 2023, 8:40 IST
Last Updated 25 ಆಗಸ್ಟ್ 2023, 8:40 IST
ಅಕ್ಷರ ಗಾತ್ರ

ಕನಕಪುರ (ರಾಮನಗರ): ಬಾಕಿ ವೇತನ ನೀಡುವಂತೆ ಒತ್ತಾಯಿಸಿ ಪೌರ ಕಾರ್ಮಿಕರಿಬ್ಬರು ಮೈ ಮೇಲೆ ಮಲ ಸುರಿದುಕೊಂಡು ಪ್ರತಿಭಟನೆ ನಡೆಸಿದ ಎರಡು ದಿನಗಳ ನಂತರ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಎ. ಶ್ರೀನಿವಾಸ್ ಅವರನ್ನು ಗುರುವಾರ ಅಮಾನತು ಮಾಡಲಾಗಿದೆ.

ಈ ಘಟನೆ ಕುರಿತು ವರದಿ ನೀಡುವಂತೆ ಜಿಲ್ಲಾ ಪಂಚಾಯಿತಿ ಸಿಇಒ ದಿಗ್ವಿಜಯ್ ಬೋಡ್ಕೆ ಅವರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚನೆ ನೀಡಿದ್ದರು. ಗುರುವಾರ ವರದಿ ಕೈ ಸೇರಿದ ಬೆನ್ನಲ್ಲೇ ಈ ಆದೇಶ ಹೊರಬಿದ್ದಿದೆ.

ಬಾಕಿ ವೇತನ ಪಾವತಿಸದೆ ನಿರ್ಲಕ್ಷ್ಯ ತೋರಿ, ಕಾರ್ಮಿಕರನ್ನು ಸತಾಯಿಸಿದ ಆರೋಪದ ಮೇಲೆ ಪಿಡಿಒ ಶ್ರೀನಿವಾಸ್ ಅವರನ್ನು ಅಮಾನತುಗೊಳಿಸಿರುವುದಾಗಿ ಸಿಇಒ ತಿಳಿಸಿದ್ದಾರೆ.

ಪಂಚಾಯಿತಿಯಲ್ಲಿ ಐದು ವರ್ಷದಿಂದ ಸ್ವಚ್ಛತೆ ಕೆಲಸ ಮಾಡುತ್ತಿದ್ದ ಪೌರ ಕಾರ್ಮಿಕರಾದ ಎನ್‌. ಸುರೇಶ್ ಮತ್ತು ವಿ. ರಂಗಯ್ಯ ಅವರ 14 ತಿಂಗಳ ವೇತನ ಬಾಕಿ ಉಳಿಸಿಕೊಳ್ಳಲಾಗಿತ್ತು.

ವೇತನಕ್ಕಾಗಿ ಪಿಡಿಒಗಳಿಗೆ ಮನವಿ ಮಾಡಿ ಹೈರಾಣಾಗಿದ್ದ ಕಾರ್ಮಿಕರು ಮಂಗಳವಾರ ಗ್ರಾಮ ಪಂಚಾಯಿತಿ ಕಚೇರಿ ಎದುರು ಮೈಮೇಲೆ ಮಲ ಸುರಿದುಕೊಂಡು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ನಂತರ ಬಾಕಿ ವೇತನ ಪಾವತಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT