ಕೆಲವು ಮತಗಟ್ಟೆಗಳ ಮುಂದೆ ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಇದ್ದರು. ಶಾಸಕ ಎ.ಮಂಜುನಾಥ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿದ್ದರು. ಕಾಂಗ್ರೆಸ್ ಮುಖಂಡರಾದ ಎಚ್.ಸಿ.ಬಾಲಕೃಷ್ಣ, ಆರ್. ರಂಗನಾಥ್ ಶೆಟ್ಟಿ, ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಕೆ.ಕೃಷ್ಣಮೂರ್ತಿ, ಜೆಡಿಎಸ್ ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ಹಾಗೂ ಜೆಡಿಎಸ್ ಮುಖಂಡರು ಇದ್ದರು. ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.