ಲೋಕಸಭೆ ಚುನಾವಣೆಗೂ ಮುನ್ನವೇ ಕಾಮಗಾರಿಯನ್ನು ಆರಂಭಿಸಲಾಗಿತ್ತು. ತಿಂಗಳುಗಳೇ ಕಳೆದರೂ ಇನ್ನೂ ಕೆಲಸ ಮುಗಿಯುತ್ತಿಲ್ಲ. ಅರ್ಧದಷ್ಟು ಭಾಗದಲ್ಲಿಈಗಾಗಲೇ ಸ್ಲ್ಯಾಬ್ ನಿರ್ಮಿಸಲಾಗಿದ್ದು, ಅದನ್ನು ಸಂಚಾರಕ್ಕೆ ಮುಕ್ತಗೊಳಿಸಿ ಉಳಿದ ಅರ್ಧ ಭಾಗದಲ್ಲಿ ಕಾಮಗಾರಿ ನಡೆದಿದೆ. ಆದರೆ ಕಾಮಗಾರಿಗಾಗಿ ಅಗೆದ ಮಣ್ಣನ್ನು ಅಲ್ಲಿಯೇ ಬಿಡಲಾಗಿದೆ. ಇದರಿಂದ ದೂಳು ಸುತ್ತಲಿನ ಪ್ರದೇಶವನ್ನು ವ್ಯಾಪಿಸಿದೆ.