ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈವರೆಗೆ ಕೇವಲ ಶೇ 50ರಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಮಾತ್ರ ಅವಕಾಶ ನೀಡಿತ್ತು. ಆದರೆ ಈ ನಿರ್ಧಾರದ ವಿರುದ್ಧ ಚಿತ್ರರಂಗದ ಮಂದಿ ಸಿಡಿದೆದ್ದಿದ್ದು, ಸರ್ಕಾರದ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಶೇ 100 ರಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಸರ್ಕಾರ ಕೆಲ ದಿನದ ಹಿಂದಷ್ಟೇ ಹಸಿರು ನಿಶಾನೆ ತೋರಿತ್ತು.