<p><strong>ರಾಮನಗರ:</strong> ‘ಇತ್ತೀಚೆಗೆ ನಿಧನರಾದ ನಿವೃತ್ತ ಐಎಎಸ್ ಅಧಿಕಾರಿ, ಸಿನಿಮಾ ನಟ ಹಾಗೂ ರಾಜಕಾರಣಿ ಜಿಲ್ಲೆಯ ಕೆ. ಶಿವರಾಂ ಅವರ ಹೆಸರಿನಲ್ಲಿ ಯುಪಿಎಸ್ಸಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರವನ್ನು ಜಿಲ್ಲಾ ಕೇಂದ್ರದಲ್ಲಿ ಸ್ಥಾಪಿಸಬೇಕು’ ಎಂದು ದಲಿತ ಮುಖಂಡ ಜಯಕಾಂತ್ ಚಾಲುಕ್ಯ ಒತ್ತಾಯಿಸಿದರು.</p>.<p>ಶಿವರಾಂ ಅವರಿಗೆ ನುಡಿನಮನ ಸಮಾರಂಭ ಹಮ್ಮಿಕೊಳ್ಳುವ ಸಲುವಾಗಿ, ನಗರದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ದಲಿತ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆದು ಪಾಸಾದ ಮೊದಲ ಐಎಎಸ್ ಅಧಿಕಾರಿ ಎಂಬ ಹೆಗ್ಗಳಿಕೆ ಶಿವರಾಂ ಅವರದ್ದು. ಅವರ ಸಾಧನೆ ಯುವಜನರಿಗೆ ಸದಾ ಸ್ಫೂರ್ತಿಯಾಗಿದೆ. ಹಾಗಾಗಿ, ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ತೆರೆದು ಅಲ್ಲಿ ಎಲ್ಲಾ ಪರೀಕ್ಷೆಗಳಿಗೂ ತರಬೇತಿ ನೀಡಬೇಕು. ಜೊತೆಗೆ, ಶಿವರಾಂ ಅವರ ಪುತ್ಥಳಿ ನಿರ್ಮಿಸಬೇಕು’ ಎಂದರು.</p>.<p>‘ಅಧಿಕಾರಿಯಾಗಿ ಶಿವರಾಂ ಅವರು ಆಡಳಿತದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಸಾವಿರಾರು ಮಂದಿಗೆ ಸಹಾಯ ಮಾಡಿದ್ದಾರೆ. ಅವರ ಆಡಳಿತ ವೈಖರಿ ಅಧಿಕಾರಿಗಳಿಗೆ ಮಾದರಿಯಾದುದು. ಸಿನಿಮಾ ನಟರೂ ಆಗಿದ್ದ ಅವರು, ಸದಭಿರುಚಿಯ ಚಿತ್ರಗಳನ್ನು ಮಾಡಿ ಜನಮಾನಸದಲ್ಲಿ ನೆಲೆಸಿದ್ದಾರೆ. ದಲಿತ ಮಹಾಸಭಾ, ಛಲವಾದಿ ಮಹಾಸಭಾ ಸ್ಥಾಪಿಸಿದ ಅವರು ತಳ ಸಮುದಾಯದವರ ಸಂಘಟನೆಗೂ ಕೊಡುಗೆ ನೀಡಿದ್ದಾರೆ’ ಎಂದು ಬಣ್ಣಿಸಿದರು.</p>.<p>ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ದಲಿತ ಸಂಘಟನೆಗಳ ಮುಖಂಡರು, ನುಡಿ ನಮನ ಸಮಾರಂಭದ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡರು. ಜಿಲ್ಲಾ ಮಟ್ಟದಲ್ಲೇ ದೊಡ್ಡದಾಗಿ ಕಾರ್ಯಕ್ರಮ ಆಯೋಜಿಸಬೇಕು ಎಂಬ ಒತ್ತಾಯ ಕೇಳಿಬಂತು. ಸದ್ಯ ಲೋಕಸಭಾ ಚುನಾವಣೆ ಹತ್ತಿರದಲ್ಲಿರುವುದರಿಂದ, ಅಧಿಸೂಚನೆ ಪ್ರಕಟವಾದ ಬಳಿಕ ಚರ್ಚಿಸಿ ಕಾರ್ಯಕ್ರಮದ ದಿನಾಂಕ ನಿಗದಿಪಡಿಸುವ ಕುರಿತು ಮುಖಂಡರು ತೀರ್ಮಾನಕ್ಕೆ ಬಂದರು.</p>.<p>ಮುಖಂಡರಾದ ಕೆ. ಶಿವಣ್ಣ, ಚಕ್ಕಲೂರು ಚೌಡಯ್ಯ, ಜಯಚಂದ್ರ, ಶಿವಶಂಕರ್, ಚಲುವರಾಜು, ಶೇಖರ್, ಬಾನಂದೂರು ಶಿವಕುಮಾರ್, ಶಿವಪ್ರಕಾಶ್, ಕುಮಾರ್, ನಿಖಿಲ್ ಸಜ್ಜೆನಿಂಗಯ್ಯ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ‘ಇತ್ತೀಚೆಗೆ ನಿಧನರಾದ ನಿವೃತ್ತ ಐಎಎಸ್ ಅಧಿಕಾರಿ, ಸಿನಿಮಾ ನಟ ಹಾಗೂ ರಾಜಕಾರಣಿ ಜಿಲ್ಲೆಯ ಕೆ. ಶಿವರಾಂ ಅವರ ಹೆಸರಿನಲ್ಲಿ ಯುಪಿಎಸ್ಸಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರವನ್ನು ಜಿಲ್ಲಾ ಕೇಂದ್ರದಲ್ಲಿ ಸ್ಥಾಪಿಸಬೇಕು’ ಎಂದು ದಲಿತ ಮುಖಂಡ ಜಯಕಾಂತ್ ಚಾಲುಕ್ಯ ಒತ್ತಾಯಿಸಿದರು.</p>.<p>ಶಿವರಾಂ ಅವರಿಗೆ ನುಡಿನಮನ ಸಮಾರಂಭ ಹಮ್ಮಿಕೊಳ್ಳುವ ಸಲುವಾಗಿ, ನಗರದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ದಲಿತ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆದು ಪಾಸಾದ ಮೊದಲ ಐಎಎಸ್ ಅಧಿಕಾರಿ ಎಂಬ ಹೆಗ್ಗಳಿಕೆ ಶಿವರಾಂ ಅವರದ್ದು. ಅವರ ಸಾಧನೆ ಯುವಜನರಿಗೆ ಸದಾ ಸ್ಫೂರ್ತಿಯಾಗಿದೆ. ಹಾಗಾಗಿ, ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ತೆರೆದು ಅಲ್ಲಿ ಎಲ್ಲಾ ಪರೀಕ್ಷೆಗಳಿಗೂ ತರಬೇತಿ ನೀಡಬೇಕು. ಜೊತೆಗೆ, ಶಿವರಾಂ ಅವರ ಪುತ್ಥಳಿ ನಿರ್ಮಿಸಬೇಕು’ ಎಂದರು.</p>.<p>‘ಅಧಿಕಾರಿಯಾಗಿ ಶಿವರಾಂ ಅವರು ಆಡಳಿತದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಸಾವಿರಾರು ಮಂದಿಗೆ ಸಹಾಯ ಮಾಡಿದ್ದಾರೆ. ಅವರ ಆಡಳಿತ ವೈಖರಿ ಅಧಿಕಾರಿಗಳಿಗೆ ಮಾದರಿಯಾದುದು. ಸಿನಿಮಾ ನಟರೂ ಆಗಿದ್ದ ಅವರು, ಸದಭಿರುಚಿಯ ಚಿತ್ರಗಳನ್ನು ಮಾಡಿ ಜನಮಾನಸದಲ್ಲಿ ನೆಲೆಸಿದ್ದಾರೆ. ದಲಿತ ಮಹಾಸಭಾ, ಛಲವಾದಿ ಮಹಾಸಭಾ ಸ್ಥಾಪಿಸಿದ ಅವರು ತಳ ಸಮುದಾಯದವರ ಸಂಘಟನೆಗೂ ಕೊಡುಗೆ ನೀಡಿದ್ದಾರೆ’ ಎಂದು ಬಣ್ಣಿಸಿದರು.</p>.<p>ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ದಲಿತ ಸಂಘಟನೆಗಳ ಮುಖಂಡರು, ನುಡಿ ನಮನ ಸಮಾರಂಭದ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡರು. ಜಿಲ್ಲಾ ಮಟ್ಟದಲ್ಲೇ ದೊಡ್ಡದಾಗಿ ಕಾರ್ಯಕ್ರಮ ಆಯೋಜಿಸಬೇಕು ಎಂಬ ಒತ್ತಾಯ ಕೇಳಿಬಂತು. ಸದ್ಯ ಲೋಕಸಭಾ ಚುನಾವಣೆ ಹತ್ತಿರದಲ್ಲಿರುವುದರಿಂದ, ಅಧಿಸೂಚನೆ ಪ್ರಕಟವಾದ ಬಳಿಕ ಚರ್ಚಿಸಿ ಕಾರ್ಯಕ್ರಮದ ದಿನಾಂಕ ನಿಗದಿಪಡಿಸುವ ಕುರಿತು ಮುಖಂಡರು ತೀರ್ಮಾನಕ್ಕೆ ಬಂದರು.</p>.<p>ಮುಖಂಡರಾದ ಕೆ. ಶಿವಣ್ಣ, ಚಕ್ಕಲೂರು ಚೌಡಯ್ಯ, ಜಯಚಂದ್ರ, ಶಿವಶಂಕರ್, ಚಲುವರಾಜು, ಶೇಖರ್, ಬಾನಂದೂರು ಶಿವಕುಮಾರ್, ಶಿವಪ್ರಕಾಶ್, ಕುಮಾರ್, ನಿಖಿಲ್ ಸಜ್ಜೆನಿಂಗಯ್ಯ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>