ಮಾಗಡಿ: ಪಟ್ಟಣದ ಸುಪ್ರಿಯಾ ಗಾರ್ಮೆಂಟ್ಸ್ ಮಾಲೀಕ ಕುಮಾರ್ (35) ಅವರಿಗೆ ಬೆಂಗಳೂರಿನಲ್ಲಿ ಭಾನುವಾರ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಅವರು ಸಾವಿಗೀಡಾಗಿದ್ದಾರೆ.
ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ಭಾನುವಾರ ಕುಮಾರ್ ಅವರ ಪತ್ನಿಯ ಸೀಮಂತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕುಮಾರ್ ಅವರು ಹೂ ತರಲೆಂದು ವಿಜಯನಗರದ ಮಾರುಕಟ್ಟೆಗೆ ಬೈಕ್ನಲ್ಲಿ ತೆರಳಿದ್ದರು. ಹೂ ತೆಗೆದುಕೊಂಡು ಮನೆಗೆ ಮರಳುತ್ತಿದ್ದಾಗ ಅವರ ಬೈಕ್ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ.
ಚಿಕಿತ್ಸೆಗೆಂದು ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಕುಮಾರ್ ಅವರ ಸಂಬಂಧಿಕರು ಮಾಹಿತಿ ನೀಡಿದ್ದಾರೆ. ಶವ ಪರೀಕ್ಷೆಯ ಬಳಿಕ ಅಂತ್ಯಕ್ರಿಯೆ ನಡೆಯಿತು.