ಮುತ್ತಯ್ಯ ಬೆಳಗ್ಗೆ ಹಸುಗಳನ್ನು ಮೇಯಿಸಲು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಬಂಟನಾಳ ಅರಣ್ಯ ಪ್ರದೇಶದ ಅಂಚಿಗೆ ತೆರಳಿದ್ದರು. ಮಧ್ಯಾಹ್ನ ಅಲ್ಲಿಂದ ವಾಪಾಸ್ ಆಗುವ ವೇಳೆ ಆನೆಯು ಏಕಾಏಕಿ ದಾಳಿ ನಡೆಸಿತು. ಪ್ರತ್ಯಕ್ಷದರ್ಶಿಗಳು ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದು, ಹಾರೋಹಳ್ಳಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದರು.