<p><strong>ಹಾರೋಹಳ್ಳಿ</strong>: ‘ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವ ಮೂಲಕ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಬೇಕು’ ಎಂದು ಜಿಲ್ಲಾ ಪರಿಸರ ಅಧಿಕಾರಿ ಮಂಜುನಾಥ್ ತಿಳಿಸಿದರು.</p>.<p>ಹಾರೋಹಳ್ಳಿಯ ಕೈಗಾರಿಕಾ ಪ್ರದೇಶದ ಆಂಥಮ್ ಬಯೊ ಸೈನ್ಸ್ ಕಾರ್ಖಾನೆ ವತಿಯಿಂದ ಕಾರ್ಖಾನೆ ಆವರಣದಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. </p>.<p>ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯ ಕೊಡುಗೆಯಾಗಿದೆ. ಪರಿಸರದಲ್ಲಿನ ಗಾಳಿ, ನೀರು, ಮಣ್ಣು, ಮರ, ಕಾಡು, ಸಾಗರ ಇತ್ಯಾದಿಗಳು ಎಂದೆಂದಿಗೂ ಉಳಿಬೇಕು ಎಂದರು. </p>.<p>ನಾವು ಸಾಧ್ಯವಾದಷ್ಟು ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಬೇಕು. ಪರಿಸರ ಚಟುವಟಿಕೆಗಳ ಬಗ್ಗೆ ಜಾಗೃತರಾಗುವ ಮೂಲಕ ಸುತ್ತಮುತ್ತಲಿನ ಸ್ವಚ್ಛತೆ ಮತ್ತು ಆರೋಗ್ಯಕರವಾಗಿರಲು ನಾವೆಲ್ಲರೂ ಶ್ರಮಿಸಬೇಕು. ಒಂದು ಸಸಿ ನೆಡುವುದರಿಂದ ಆಮ್ಲಜನಕ ಕೊರತೆ ನೀಗಿಸಬಹುದು ಎಂದರು.</p>.<p>ಪರಿಸರ ಉಪ ಅಧಿಕಾರಿ ಮೀನಾಕ್ಷಿ, ಆಂಥಮ್ ಬಯೋಸೈನ್ಸ್ ಕಾರ್ಖಾನೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಕೆ.ಸಿ, ಸೈಟ್ ಮುಖ್ಯಸ್ಥ ರಾಘವೇಂದ್ರ ವೆಂಕಟ, ಕಾರ್ಯದರ್ಶಿ ರಾಮ್ ಕೃಷ್ಣನ್, ವ್ಯವಸ್ಥಾಪಕ ಕಪಿನಿಗೌಡ, ಸಂಪನ್ಮೂಲ ವ್ಯವಸ್ಥಾಪಕ ಸುನೀಲ್, ನಿರ್ವಾಹಕ ಶಂಕರ್, ರಾಮಕೃಷ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾರೋಹಳ್ಳಿ</strong>: ‘ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವ ಮೂಲಕ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಬೇಕು’ ಎಂದು ಜಿಲ್ಲಾ ಪರಿಸರ ಅಧಿಕಾರಿ ಮಂಜುನಾಥ್ ತಿಳಿಸಿದರು.</p>.<p>ಹಾರೋಹಳ್ಳಿಯ ಕೈಗಾರಿಕಾ ಪ್ರದೇಶದ ಆಂಥಮ್ ಬಯೊ ಸೈನ್ಸ್ ಕಾರ್ಖಾನೆ ವತಿಯಿಂದ ಕಾರ್ಖಾನೆ ಆವರಣದಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. </p>.<p>ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯ ಕೊಡುಗೆಯಾಗಿದೆ. ಪರಿಸರದಲ್ಲಿನ ಗಾಳಿ, ನೀರು, ಮಣ್ಣು, ಮರ, ಕಾಡು, ಸಾಗರ ಇತ್ಯಾದಿಗಳು ಎಂದೆಂದಿಗೂ ಉಳಿಬೇಕು ಎಂದರು. </p>.<p>ನಾವು ಸಾಧ್ಯವಾದಷ್ಟು ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಬೇಕು. ಪರಿಸರ ಚಟುವಟಿಕೆಗಳ ಬಗ್ಗೆ ಜಾಗೃತರಾಗುವ ಮೂಲಕ ಸುತ್ತಮುತ್ತಲಿನ ಸ್ವಚ್ಛತೆ ಮತ್ತು ಆರೋಗ್ಯಕರವಾಗಿರಲು ನಾವೆಲ್ಲರೂ ಶ್ರಮಿಸಬೇಕು. ಒಂದು ಸಸಿ ನೆಡುವುದರಿಂದ ಆಮ್ಲಜನಕ ಕೊರತೆ ನೀಗಿಸಬಹುದು ಎಂದರು.</p>.<p>ಪರಿಸರ ಉಪ ಅಧಿಕಾರಿ ಮೀನಾಕ್ಷಿ, ಆಂಥಮ್ ಬಯೋಸೈನ್ಸ್ ಕಾರ್ಖಾನೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಕೆ.ಸಿ, ಸೈಟ್ ಮುಖ್ಯಸ್ಥ ರಾಘವೇಂದ್ರ ವೆಂಕಟ, ಕಾರ್ಯದರ್ಶಿ ರಾಮ್ ಕೃಷ್ಣನ್, ವ್ಯವಸ್ಥಾಪಕ ಕಪಿನಿಗೌಡ, ಸಂಪನ್ಮೂಲ ವ್ಯವಸ್ಥಾಪಕ ಸುನೀಲ್, ನಿರ್ವಾಹಕ ಶಂಕರ್, ರಾಮಕೃಷ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>