ಪರಿಸರ ಎಂಜಿನಿಯರ್ ಬಿ.ಸಿ.ಅರ್ಚನಾ ಮಾತನಾಡಿ, ‘ತನ್ನ ಸುತ್ತ-ಮುತ್ತಲಿನ ಪರಿಸರದ ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಈ ದಿಕ್ಕಿನಲ್ಲಿ ಬೀದಿ ಬದಿ ವ್ಯಾಪಾರಿಗಳು ತಮ್ಮ ವ್ಯವಹಾರದ ಜತೆಗೆ,ತಮ್ಮೂರಿನ ಸ್ವಚ್ಛತೆ ಮತ್ತು ನೈರ್ಮಲ್ಯತೆಯನ್ನು ಕಾಪಾಡುವಲ್ಲಿ ವಿಶೇಷ ಗಮನಹರಿಸಬೇಕು’ ಎಂದು ಸಲಹೆ ನೀಡಿದರು.