<p><strong>ಮಾಗಡಿ</strong>: ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಜೆ.ಆರ್.ರವೀಶ್ ಮತ್ತು ಉಪಾಧ್ಯಕ್ಷರಾಗಿ ಹನುಮಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p>ಬುಧವಾರ ನಡೆದ ಚುನಾವಣೆಗೆ ಎರಡೂ ಸ್ಥಾನಗಳಿಗೆ ತಲಾ ಒಂದೊಂದೇ ನಾಮಪತ್ರ ಸಲ್ಲಿಕೆಯಾಗಿದ್ದ ಕಾರಣ ಚುನಾವಣಾಧಿಕಾರಿ ವೆಂಕಟೇಶ್ ಇಬ್ಬರ ಅವಿರೋಧ ಆಯ್ಕೆ ಘೋಷಿಸಿದರು. ಬೆಂಬಲಿಗರು ಸಿಹಿ ಹಂಚಿ ಸಂಭ್ರಮಿಸಿದರು.</p>.<p>ರೈತರಿಗೆ ಸರ್ಕಾರದಿಂದ ಸಿಗಬೇಕಾದ ಸಾಲ ಸೌಲಭ್ಯಗಳನ್ನು ಸರಿಯಾದ ಸಮಯಕ್ಕೆ ಕೊಡಿಸಲಾಗುವುದು ಎಂದು ನೂತನ ಅಧ್ಯಕ್ಷ ಜೆ.ಆರ್. ರವೀಶ್ ಭರವಸೆ ನೀಡಿದರು.</p>.<p>ಪ್ರತಿ ವಾರ್ಷಿಕ ಸಭೆ ಮತ್ತು ಬ್ಯಾಂಕಿನ ವ್ಯವಹಾರಗಳ ಬಗ್ಗೆ ಮಾಹಿತಿ ತಲುಪಿಸಿ ಮುಂದಿನ ಬಾರಿ ಎಲ್ಲಾ ಸದಸ್ಯರು ಮತದಾನ ಹಕ್ಕು ಸಿಗುವ ಕೆಲಸ ಮಾಡಲಾಗುವುದು ಎಂದು ಹೇಳಿದರು.</p>.<p>ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ.ಕೆ. ಧನಂಜಯ, ಎಚ್.ಎನ್. ಅಶೋಕ್, ಬಮೂಲ್ ನಿರ್ದೇಶಕ ನರಸಿಂಹಮೂರ್ತಿ, ಪಿಎಲ್ಡಿ ಬ್ಯಾಂಕ್ ನಿರ್ದೇಶಕರಾದ ನಿರ್ಮಲ ಸೀತಾರಾಂ, ಕೆ.ಜಿ. ನಾಗರಾಜು, ಹರಣಿ ದೇವೇಂದ್ರಪ್ಪ, ವೇಣುಗೋಪಾಲ್, ತಿಮ್ಮೇಗೌಡ, ಚಂದ್ರೇಗೌಡ, ಚನ್ನಗಂಗಯ್ಯ, ಯಶೋಧ, ಸಿದ್ದೇಗೌಡ, ಶಶಾಂಕ್, ಟಿ.ಜಿ.ಭವ್ಯ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ</strong>: ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಜೆ.ಆರ್.ರವೀಶ್ ಮತ್ತು ಉಪಾಧ್ಯಕ್ಷರಾಗಿ ಹನುಮಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p>ಬುಧವಾರ ನಡೆದ ಚುನಾವಣೆಗೆ ಎರಡೂ ಸ್ಥಾನಗಳಿಗೆ ತಲಾ ಒಂದೊಂದೇ ನಾಮಪತ್ರ ಸಲ್ಲಿಕೆಯಾಗಿದ್ದ ಕಾರಣ ಚುನಾವಣಾಧಿಕಾರಿ ವೆಂಕಟೇಶ್ ಇಬ್ಬರ ಅವಿರೋಧ ಆಯ್ಕೆ ಘೋಷಿಸಿದರು. ಬೆಂಬಲಿಗರು ಸಿಹಿ ಹಂಚಿ ಸಂಭ್ರಮಿಸಿದರು.</p>.<p>ರೈತರಿಗೆ ಸರ್ಕಾರದಿಂದ ಸಿಗಬೇಕಾದ ಸಾಲ ಸೌಲಭ್ಯಗಳನ್ನು ಸರಿಯಾದ ಸಮಯಕ್ಕೆ ಕೊಡಿಸಲಾಗುವುದು ಎಂದು ನೂತನ ಅಧ್ಯಕ್ಷ ಜೆ.ಆರ್. ರವೀಶ್ ಭರವಸೆ ನೀಡಿದರು.</p>.<p>ಪ್ರತಿ ವಾರ್ಷಿಕ ಸಭೆ ಮತ್ತು ಬ್ಯಾಂಕಿನ ವ್ಯವಹಾರಗಳ ಬಗ್ಗೆ ಮಾಹಿತಿ ತಲುಪಿಸಿ ಮುಂದಿನ ಬಾರಿ ಎಲ್ಲಾ ಸದಸ್ಯರು ಮತದಾನ ಹಕ್ಕು ಸಿಗುವ ಕೆಲಸ ಮಾಡಲಾಗುವುದು ಎಂದು ಹೇಳಿದರು.</p>.<p>ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ.ಕೆ. ಧನಂಜಯ, ಎಚ್.ಎನ್. ಅಶೋಕ್, ಬಮೂಲ್ ನಿರ್ದೇಶಕ ನರಸಿಂಹಮೂರ್ತಿ, ಪಿಎಲ್ಡಿ ಬ್ಯಾಂಕ್ ನಿರ್ದೇಶಕರಾದ ನಿರ್ಮಲ ಸೀತಾರಾಂ, ಕೆ.ಜಿ. ನಾಗರಾಜು, ಹರಣಿ ದೇವೇಂದ್ರಪ್ಪ, ವೇಣುಗೋಪಾಲ್, ತಿಮ್ಮೇಗೌಡ, ಚಂದ್ರೇಗೌಡ, ಚನ್ನಗಂಗಯ್ಯ, ಯಶೋಧ, ಸಿದ್ದೇಗೌಡ, ಶಶಾಂಕ್, ಟಿ.ಜಿ.ಭವ್ಯ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>