<p><strong>ಮಾಗಡಿ</strong>: ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ₹9.5ಕೋಟಿ ನಷ್ಟದಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಕಾರಣದಿಂದಾಗಿ ರೈತರಿಗೆ ಡಿವಿಡೆಂಡ್ ನೀಡಲು ಸಾಧ್ಯವಾಗಿಲ್ಲ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಎನ್.ಅಶೋಕ್ ತಿಳಿಸಿದರು.</p>.<p>ಪಿಎಲ್ಡಿ ಬ್ಯಾಂಕ್ 2024-25ನೇ ಸಾಲಿನ ಸದಸ್ಯರ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದ ಅವರು, ರೈತರ ಸಕಾಲಿಕ ಸಾಲ ಮರುಪಾವತಿ ಇಲ್ಲದಿರುವುದು ನಷ್ಟಕ್ಕೆ ಮುಖ್ಯ ಕಾರಣವಾಗಿದೆ. ಸರ್ಕಾರಕ್ಕೆ ₹12ಕೋಟಿ ಸಾಲ ಬಾಕಿ ಇದ್ದು, ರೈತರಿಂದ ₹7 ಕೋಟಿ ವಸೂಲಿ ಮಾಡಬೇಕಾದ ಅಗತ್ಯವಿದೆ ಎಂದರು.</p>.<p>ಈ ನಷ್ಟವನ್ನು ಭರ್ತಿ ಮಾಡಲು ಸರ್ಕಾರದ ಹಸ್ತಕ್ಷೇಪ ಅಗತ್ಯವಿದೆ. ವೈದ್ಯನಾಥ್ ವರದಿ ಪ್ರಕಾರ ಸರ್ಕಾರವೇ ನಷ್ಟ ಭರ್ತಿ ಮಾಡಿದರೆ ಮಾತ್ರ ಬ್ಯಾಂಕ್ ಪುನರ್ ಜೀವನ ಪಡೆಯಲು ಸಾಧ್ಯ. ಇಲ್ಲದಿದ್ದರೆ ಬ್ಯಾಂಕ್ ಮುಂದೆಯೂ ನಷ್ಟದಲ್ಲೇ ಮುಂದುವರಿಯುವ ಸಾಧ್ಯತೆ ಇದೆ ಎಂದರು.</p>.<p>ಬ್ಯಾಂಕ್ನ ಪ್ರಸ್ತುತ ಕಟ್ಟಡ ದುರ್ಬಲ ಸ್ಥಿತಿಯಲ್ಲಿದೆ. ಈ ಸಮಸ್ಯೆ ಪರಿಹರಿಸಲು ಪುರಸಭೆಯೊಂದಿಗೆ ಜಾಗ ವಿನಿಮಯ ಒಪ್ಪಂದಕ್ಕೆ ಬರಲು ಯೋಜನೆ ರೂಪುಗೊಂಡಿದೆ. ಪುರಸಭೆಯು ಮಾಗಡಿ-ಬೆಂಗಳೂರು ಮುಖ್ಯ ರಸ್ತೆಯಲ್ಲಿರುವ ಕಸಾಯಿ ಕಾರ್ಖಾನೆ ಜಾಗದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ₹8ಲಕ್ಷ ಪಾವತಿಸಲು ಒಪ್ಪಿದೆ ಎಂದರು.</p>.<p>ಬ್ಯಾಂಕ್ ಅಧ್ಯಕ್ಷ ಜೆ.ಆರ್.ರವೀಶ್, ರೈತರು ತಮ್ಮ ಸಾಲವನ್ನು ಸಕಾಲಿಕವಾಗಿ ಮರುಪಾವತಿ ಮಾಡುವಂತೆ ಮನವಿ ಮಾಡಿದರು.</p>.<p>ಸಭೆಯಲ್ಲಿ 2024-25 ಸಾಲಿನ ಲೆಕ್ಕಶೋಧನಾ ವರದಿ ಅನುಮೋದನೆ ಪಡೆಯಿತು. ಉಪಾಧ್ಯಕ್ಷ ಹನುಮಂತಯ್ಯ, ನಿರ್ದೇಶಕ ನಾಗರಾಜು, ಅರುಣಿ, ದೇವೇಂದ್ರ, ವೇಣುಗೋಪಾಲು ಸೇರಿದಂತೆ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ</strong>: ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ₹9.5ಕೋಟಿ ನಷ್ಟದಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಕಾರಣದಿಂದಾಗಿ ರೈತರಿಗೆ ಡಿವಿಡೆಂಡ್ ನೀಡಲು ಸಾಧ್ಯವಾಗಿಲ್ಲ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಎನ್.ಅಶೋಕ್ ತಿಳಿಸಿದರು.</p>.<p>ಪಿಎಲ್ಡಿ ಬ್ಯಾಂಕ್ 2024-25ನೇ ಸಾಲಿನ ಸದಸ್ಯರ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದ ಅವರು, ರೈತರ ಸಕಾಲಿಕ ಸಾಲ ಮರುಪಾವತಿ ಇಲ್ಲದಿರುವುದು ನಷ್ಟಕ್ಕೆ ಮುಖ್ಯ ಕಾರಣವಾಗಿದೆ. ಸರ್ಕಾರಕ್ಕೆ ₹12ಕೋಟಿ ಸಾಲ ಬಾಕಿ ಇದ್ದು, ರೈತರಿಂದ ₹7 ಕೋಟಿ ವಸೂಲಿ ಮಾಡಬೇಕಾದ ಅಗತ್ಯವಿದೆ ಎಂದರು.</p>.<p>ಈ ನಷ್ಟವನ್ನು ಭರ್ತಿ ಮಾಡಲು ಸರ್ಕಾರದ ಹಸ್ತಕ್ಷೇಪ ಅಗತ್ಯವಿದೆ. ವೈದ್ಯನಾಥ್ ವರದಿ ಪ್ರಕಾರ ಸರ್ಕಾರವೇ ನಷ್ಟ ಭರ್ತಿ ಮಾಡಿದರೆ ಮಾತ್ರ ಬ್ಯಾಂಕ್ ಪುನರ್ ಜೀವನ ಪಡೆಯಲು ಸಾಧ್ಯ. ಇಲ್ಲದಿದ್ದರೆ ಬ್ಯಾಂಕ್ ಮುಂದೆಯೂ ನಷ್ಟದಲ್ಲೇ ಮುಂದುವರಿಯುವ ಸಾಧ್ಯತೆ ಇದೆ ಎಂದರು.</p>.<p>ಬ್ಯಾಂಕ್ನ ಪ್ರಸ್ತುತ ಕಟ್ಟಡ ದುರ್ಬಲ ಸ್ಥಿತಿಯಲ್ಲಿದೆ. ಈ ಸಮಸ್ಯೆ ಪರಿಹರಿಸಲು ಪುರಸಭೆಯೊಂದಿಗೆ ಜಾಗ ವಿನಿಮಯ ಒಪ್ಪಂದಕ್ಕೆ ಬರಲು ಯೋಜನೆ ರೂಪುಗೊಂಡಿದೆ. ಪುರಸಭೆಯು ಮಾಗಡಿ-ಬೆಂಗಳೂರು ಮುಖ್ಯ ರಸ್ತೆಯಲ್ಲಿರುವ ಕಸಾಯಿ ಕಾರ್ಖಾನೆ ಜಾಗದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ₹8ಲಕ್ಷ ಪಾವತಿಸಲು ಒಪ್ಪಿದೆ ಎಂದರು.</p>.<p>ಬ್ಯಾಂಕ್ ಅಧ್ಯಕ್ಷ ಜೆ.ಆರ್.ರವೀಶ್, ರೈತರು ತಮ್ಮ ಸಾಲವನ್ನು ಸಕಾಲಿಕವಾಗಿ ಮರುಪಾವತಿ ಮಾಡುವಂತೆ ಮನವಿ ಮಾಡಿದರು.</p>.<p>ಸಭೆಯಲ್ಲಿ 2024-25 ಸಾಲಿನ ಲೆಕ್ಕಶೋಧನಾ ವರದಿ ಅನುಮೋದನೆ ಪಡೆಯಿತು. ಉಪಾಧ್ಯಕ್ಷ ಹನುಮಂತಯ್ಯ, ನಿರ್ದೇಶಕ ನಾಗರಾಜು, ಅರುಣಿ, ದೇವೇಂದ್ರ, ವೇಣುಗೋಪಾಲು ಸೇರಿದಂತೆ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>