<p><strong>ರಾಮನಗರ: </strong>ಇಲ್ಲಿನ ರೆಹಮಾನಿಯಾ ನಗರದ ಸಯ್ಯದ್ ತೌಸಿಫ್ (18) ಎಂಬ ಅಂಗವಿಕಲ ಯುವಕನಿಗೆ ಮನಬಂದಂತೆ ಥಳಿಸಲಾಗಿದ್ದು, ಸದ್ಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.</p>.<p>ರಾಮನಗರ ಟೌನ್ ಪೊಲೀಸರು ಹೀಗೆ ಯುವಕನಿಗೆ ಥಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಗಾಯಗೊಂಡ ಯುವಕ ಬುದ್ಧಿಮಾಂದ್ಯ ಎಂದೂ ಹೇಳಲಾಗಿದೆ. ಆದರೆ ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ. ಯುವಕನ ಮೈ ಮೇಲೆ ಆಗಿರುವ ಗಾಯಗಳ ಚಿತ್ರಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.</p>.<p>ಆದದ್ದೇನು: ಪೊಲೀಸರ ಪ್ರಕಾರ, ಕೆಲವು ದಿನದ ಹಿಂದೆ ತೌಸಿಫ್ ಹಾಗೂ ಆತನ ಇಬ್ಬರು ಗೆಳೆಯರು ನಗರದ ಮಹಿಳಾ ವಸತಿ ನಿಲಯವೊಂದರ ಮುಂದೆ ಅಸಭ್ಯವಾಗಿ ವರ್ತಿಸುತ್ತಿದ್ದರು. ಈ ಸಂದರ್ಭ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಉಳಿದ ಇಬ್ಬರು ಸ್ಥಳದಿಂದ ಪರಾರಿ ಆಗಿದ್ದಾರೆ. ತೌಸಿಫ್ ಸಿಕ್ಕಿ ಬಿದ್ದಿದ್ದು, ಆ ಸಂದರ್ಭ ಪೊಲೀಸರು ಲಾಠಿಯಿಂದ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.</p>.<p>ತೌಸಿಫ್ ಈ ಹಿಂದೆಯೂ ಹಾಸ್ಟೆಲ್ ಮುಂಭಾಗ ಹೀಗೆ ಅಸಭ್ಯವಾಗಿ ವರ್ತಿಸಿದ್ದು, ಅಲ್ಲಿನ ನಿಲಯ ಪಾಲಕರು ಪೊಲೀಸರಿಗೆ ದೂರು ನೀಡಿದ್ದರು ಎಂದು ತಿಳಿದುಬಂದಿದೆ. ಹಲ್ಲೆಗೆ ಒಳಗಾದ ಯುವಕನ ಪೋಷಕರು ದೂರು ನೀಡದೇ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಪೊಲೀಸರೂ ಯಾವುದೇ ದೂರು ದಾಖಲಿಸಿಕೊಂಡಿಲ್ಲ.</p>.<p>* ಥಳಿತಕ್ಕೆ ಒಳಗಾದ ಎನ್ನಲಾದ ಯುವಕನ ಪೋಷಕರು ದೂರು ನೀಡಿಲ್ಲ. ನೀಡಿದರೆ ಪರಿಶೀಲಿಸಿ ಕ್ರಮ ಜರುಗಿಸುತ್ತೇನೆ<br /><strong>ಬಿ. ರಮೇಶ್</strong><br />ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ಇಲ್ಲಿನ ರೆಹಮಾನಿಯಾ ನಗರದ ಸಯ್ಯದ್ ತೌಸಿಫ್ (18) ಎಂಬ ಅಂಗವಿಕಲ ಯುವಕನಿಗೆ ಮನಬಂದಂತೆ ಥಳಿಸಲಾಗಿದ್ದು, ಸದ್ಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.</p>.<p>ರಾಮನಗರ ಟೌನ್ ಪೊಲೀಸರು ಹೀಗೆ ಯುವಕನಿಗೆ ಥಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಗಾಯಗೊಂಡ ಯುವಕ ಬುದ್ಧಿಮಾಂದ್ಯ ಎಂದೂ ಹೇಳಲಾಗಿದೆ. ಆದರೆ ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ. ಯುವಕನ ಮೈ ಮೇಲೆ ಆಗಿರುವ ಗಾಯಗಳ ಚಿತ್ರಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.</p>.<p>ಆದದ್ದೇನು: ಪೊಲೀಸರ ಪ್ರಕಾರ, ಕೆಲವು ದಿನದ ಹಿಂದೆ ತೌಸಿಫ್ ಹಾಗೂ ಆತನ ಇಬ್ಬರು ಗೆಳೆಯರು ನಗರದ ಮಹಿಳಾ ವಸತಿ ನಿಲಯವೊಂದರ ಮುಂದೆ ಅಸಭ್ಯವಾಗಿ ವರ್ತಿಸುತ್ತಿದ್ದರು. ಈ ಸಂದರ್ಭ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಉಳಿದ ಇಬ್ಬರು ಸ್ಥಳದಿಂದ ಪರಾರಿ ಆಗಿದ್ದಾರೆ. ತೌಸಿಫ್ ಸಿಕ್ಕಿ ಬಿದ್ದಿದ್ದು, ಆ ಸಂದರ್ಭ ಪೊಲೀಸರು ಲಾಠಿಯಿಂದ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.</p>.<p>ತೌಸಿಫ್ ಈ ಹಿಂದೆಯೂ ಹಾಸ್ಟೆಲ್ ಮುಂಭಾಗ ಹೀಗೆ ಅಸಭ್ಯವಾಗಿ ವರ್ತಿಸಿದ್ದು, ಅಲ್ಲಿನ ನಿಲಯ ಪಾಲಕರು ಪೊಲೀಸರಿಗೆ ದೂರು ನೀಡಿದ್ದರು ಎಂದು ತಿಳಿದುಬಂದಿದೆ. ಹಲ್ಲೆಗೆ ಒಳಗಾದ ಯುವಕನ ಪೋಷಕರು ದೂರು ನೀಡದೇ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಪೊಲೀಸರೂ ಯಾವುದೇ ದೂರು ದಾಖಲಿಸಿಕೊಂಡಿಲ್ಲ.</p>.<p>* ಥಳಿತಕ್ಕೆ ಒಳಗಾದ ಎನ್ನಲಾದ ಯುವಕನ ಪೋಷಕರು ದೂರು ನೀಡಿಲ್ಲ. ನೀಡಿದರೆ ಪರಿಶೀಲಿಸಿ ಕ್ರಮ ಜರುಗಿಸುತ್ತೇನೆ<br /><strong>ಬಿ. ರಮೇಶ್</strong><br />ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>