ಕುದೂರು: ಜೂಜಾಟ ಆಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು 11 ಮಂದಿ ಜೂಜುಕೋರರನ್ನು ಬಂಧಿಸಿ, ನಗದು ವಶಪಡಿಸಿಕೊಂಡಿದ್ದಾರೆ.
ಹೋಬಳಿಯ ತಿಮ್ಮೇಗೌಡನಪಾಳ್ಯದ ಜಮೀನೊಂದರಲ್ಲಿ ಜೂಜಾಟ ಆಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸಬ್ ಇನ್ಸ್ಪೆಕ್ಟರ್ ಕೃಷ್ಣಮೂರ್ತಿ ಹಾಗೂ ತಂಡ ದಾಳಿ ನಡೆಸಿದರು.
ದಾಳಿಯ ವೇಳೆ ಕುದೂರಿನ ಉಮೇಶ, ನಾರಾಯಣ ಸಿಕ್ಕಿಬಿದ್ದಿದ್ದು, ಸಿದ್ದರಾಜು, ಗಿರೀಶ, ಹರೀಶ, ಪುಟ್ಟರಂಗ, ಪುಟ್ಟಣ್ಣ, ಹನುಮಂತಯ್ಯ, ಚಂದ್ರೇಗೌಡ, ಸುರೇಶ್, ಅಜ್ಜಹಳ್ಳಿಯ ಗಿರೀಶ ತಪ್ಪಿಸಿ ಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರಿಂದ ಪೊಲೀಸರು ₹3,000, 5 ಬೈಕ್ ವಶಕ್ಕೆ ಪಡೆದಿದ್ದಾರೆ.