ಚನ್ನಪಟ್ಟಣ: ಕಣ್ವ ಜಲಾಶಯ ಬಳಿಯಟ್ರೀ ಕ್ಯೂಟ್ರಾ ರೆಸಾರ್ಟ್ ಮೇಲೆ ಶುಕ್ರವಾರ ರಾತ್ರಿ ದಾಳಿ ನಡೆಸಿದ ಪೊಲೀಸರು ಹೊಸ ವರ್ಷಾಚರಣೆ ಪಾರ್ಟಿ ನಡೆಸಲು ಅವಕಾಶ ಮಾಡಿ ಕೊಟ್ಟ ರೆಸಾರ್ಟ್ ಮಾಲೀಕನನ್ನು ಬಂಧಿ ಸಿದ್ದಾರೆ.
ಕೋವಿಡ್ ನೈಟ್ ಕರ್ಫ್ಯೂ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ರೆಸಾರ್ಟ್ಮಾಲೀಕ ಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಬೆಂಗಳೂರು ಹಾಗೂ ಇನ್ನಿತರ ಜಿಲ್ಲೆಗಳಿಂದ ಆಗಮಿಸಿದ್ದ ಯುವಕ ಯುವತಿಯರು ರೆಸಾರ್ಟ್ನಲ್ಲಿ ಮೋಜು ಮಸ್ತಿಯಲ್ಲಿ ತೊಡಗಿದ್ದರು. ಅವರಿಗೆ ಬೈದು ಬುದ್ದಿವಾದ ಹೇಳಿ ವಾಪಸ್ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಿರೀಶ್ ತಿಳಿಸಿದ್ದಾರೆ.