ಸೋಮವಾರ ಹಾರೋಹಳ್ಳಿ ಹಾಗೂ ಮರಳವಾಡಿ ಹೋಬಳಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದರು. ಜಿಲ್ಲೆಯ ಕಾಂಗ್ರೆಸ್ ಶಾಸಕರಿಗೆ ಈಗಾಗಲೇ ಹತಾಶೆ ಮನೋಭಾವ ಆರಂಭವಾಗಿದೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಒಳಗಡೆ ಆತಂಕವಿದೆ. ಜನರನ್ನು ದಿಕ್ಕು ತಪ್ಪಿಸಿ ಮತ ಹಾಕಿಸಿಕೊಳ್ಳುವುದು ಕಾಂಗ್ರೆಸ್ ಸಂಸ್ಕೃತಿ ಎಂದು ಟೀಕಿಸಿದರು.