ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ಕೆ.ಶಿ ಪರವಾಗಿ ಕುಟುಂಬದವರಿಂದ ಪೂಜೆ

Last Updated 3 ಸೆಪ್ಟೆಂಬರ್ 2019, 13:20 IST
ಅಕ್ಷರ ಗಾತ್ರ

ಕನಕಪುರ: ಇಲ್ಲಿನ ದೊಡ್ಡಾಲಹಳ್ಳಿ ಗ್ರಾಮದಲ್ಲಿ ಶಾಸಕ ಡಿ.ಕೆ.ಶಿವಕುಮಾರ್‌ ಅವರ ಪುತ್ರ ಆಕಾಶ್‌, ತಾತ ಕೆಂಪೇಗೌಡ ಅವರ ಸಮಾಧಿಗೆ ತಂದೆಯ ಪರವಾಗಿ ಸೋಮವಾರ ಪೂಜೆ ಸಲ್ಲಿಸಿದರು.

ಶಾಸಕ ಡಿ.ಕೆ.ಶಿವಕುಮಾರ್‌ ಮತ್ತು ಸಂಸದ ಡಿ.ಕೆ.ಸುರೇಶ್‌ ಅವರ ತಂದೆ ದೊಡ್ಡಾಲಹಳ್ಳಿ ಕೆಂಪೇಗೌಡರ ಸಮಾಧಿಗೆ ಗೌರಿ ಹಬ್ಬದಂದು ಪೂಜೆ ಸಲ್ಲಿಸಿ, ಎಡೆ ಇಡುವುದು ಕುಟುಂಬದ ಸಂಪ್ರದಾಯ. ಅದರಂತೆ ಶಿವಕುಮಾರ್‌ ಮತ್ತು ಸಹೋದರ ಸುರೇಶ್‌ ಎಡೆ ಇಡುವ ಮತ್ತು ಪೂಜೆ ನೆರವೇರಿಸುವ ಕಾರ್ಯ ಮಾಡಬೇಕಿತ್ತು.

ದೆಹಲಿಯಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ವಿಚಾರಣೆಗೆ ಒಳಪಟ್ಟಿರುವ ಶಿವಕುಮಾರ್‌ ಅವರು ತಂದೆ ಸೇರಿದಂತೆ ಹಿರಿಯರ ಪೂಜೆ ಕಾರ್ಯದಲ್ಲಿ ಪಾಲ್ಗೊಳ್ಳಲು ಸೋಮವಾರ ಒಂದು ದಿನದ ಮಟ್ಟಿಗೆ ಅವಕಾಶ ಕೋರಿದ್ದರು. ಅಧಿಕಾರಿಗಳು ಅನುಮತಿ ನಿರಾಕರಿಸಿ ಸೋಮವಾರವೂ ವಿಚಾರಣೆ ನಡೆಸಿದ್ದರಿಂದ ಅವರು ಬಂದಿರಲಿಲ್ಲ.

ಅವರ ಪರವಾಗಿ ಆಕಾಶ್‌ ಪೂಜೆ ನೆರವೇರಿಸಿದರು. ಶಿವಕುಮಾರ್‌ ತಾಯಿ ಗೌರಮ್ಮ, ಪತ್ನಿ ಉಷಾ, ಮಗಳು ಐಶ್ವರ್ಯ ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT