<p><strong>ಕನಕಪುರ:</strong> ಪಿಒಪಿಯಿಂದ ತಯಾರು ಮಾಡಿದ್ದ ಗೌರಿ ಗಣೇಶ ಮೂರ್ತಿಗಳನ್ನು ಮಾರಾಟ ಮಾಡುತ್ತಿದ್ದ ಮಳಿಗೆ ಮೇಲೆ ನಗರಸಭೆ ಅಧ್ಯಕ್ಷ ಮತ್ತು ಪೌರಾಯುಕ್ತ ದಾಳಿ ನಡೆಸಿ ಎರಡು ಪಿಒಪಿ ಗಣೇಶ ಮೂರ್ತಿಯನ್ನು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.</p>.<p>ನಗರಸಭೆ ಅಧ್ಯಕ್ಷೆ ಹೇಮರಾಜು, ನಗರಸಭೆ ಪೌರಾಯುಕ್ತ ಎಂ.ಎಸ್.ಮಹದೇವ್ ಅಂಗಡಿ ಮಳಿಗೆಗಳ ಮೇಲೆ ದಾಳಿ ನಡೆಸಿದರು.</p>.<p>ಬೂದಿಕೆರೆ ರಸ್ತೆ ಕೃಷ್ಣ ಕಲ್ಯಾಣ ಮಂಟಪ ಬಳಿ ಮಾರಾಟ ಮಾಡುತ್ತಿದ್ದ ಸ್ಥಳದಲ್ಲಿ ಒಂದು ಗಣೇಶ ಮೂರ್ತಿ ಮತ್ತು ಬಸ್ ನಿಲ್ದಾಣದ ಕಾಳಿಕಾಂಬ ದೇವಸ್ಥಾನದಲ್ಲಿ ಮಾರಾಟ ಮಾಡುತ್ತಿದ್ದ ಒಂದು ಗಣೇಶ ಮೂರ್ತಿಯನ್ನು ವಶಕ್ಕೆ ಪಡೆದರು.</p>.<p>ದಾಳಿ ಕಾರ್ಯಾಚರಣೆಯಲ್ಲಿ ನಗರಸಭೆ ಆರೋಗ್ಯ ನಿರೀಕ್ಷರಾದ ಮಲ್ಲಿಕಾರ್ಜುನ್ ಶರಣಪ್ಪ, ಶಾಂತರಾಜು, ವೆಂಕಟೇಶ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.</p>.<p>ಪಿಒಪಿ ಗಣೇಶ್ ಕಂಡು ಬಂದರೆ ಗಣೇಶ ಕೂರಿಸಿದವರು ಮತ್ತು ಅದನ್ನು ಮಾರಿದವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಪೌರಾಯುಕ್ತ ಎಂ.ಎಸ್.ಮಹದೇವ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ಪಿಒಪಿಯಿಂದ ತಯಾರು ಮಾಡಿದ್ದ ಗೌರಿ ಗಣೇಶ ಮೂರ್ತಿಗಳನ್ನು ಮಾರಾಟ ಮಾಡುತ್ತಿದ್ದ ಮಳಿಗೆ ಮೇಲೆ ನಗರಸಭೆ ಅಧ್ಯಕ್ಷ ಮತ್ತು ಪೌರಾಯುಕ್ತ ದಾಳಿ ನಡೆಸಿ ಎರಡು ಪಿಒಪಿ ಗಣೇಶ ಮೂರ್ತಿಯನ್ನು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.</p>.<p>ನಗರಸಭೆ ಅಧ್ಯಕ್ಷೆ ಹೇಮರಾಜು, ನಗರಸಭೆ ಪೌರಾಯುಕ್ತ ಎಂ.ಎಸ್.ಮಹದೇವ್ ಅಂಗಡಿ ಮಳಿಗೆಗಳ ಮೇಲೆ ದಾಳಿ ನಡೆಸಿದರು.</p>.<p>ಬೂದಿಕೆರೆ ರಸ್ತೆ ಕೃಷ್ಣ ಕಲ್ಯಾಣ ಮಂಟಪ ಬಳಿ ಮಾರಾಟ ಮಾಡುತ್ತಿದ್ದ ಸ್ಥಳದಲ್ಲಿ ಒಂದು ಗಣೇಶ ಮೂರ್ತಿ ಮತ್ತು ಬಸ್ ನಿಲ್ದಾಣದ ಕಾಳಿಕಾಂಬ ದೇವಸ್ಥಾನದಲ್ಲಿ ಮಾರಾಟ ಮಾಡುತ್ತಿದ್ದ ಒಂದು ಗಣೇಶ ಮೂರ್ತಿಯನ್ನು ವಶಕ್ಕೆ ಪಡೆದರು.</p>.<p>ದಾಳಿ ಕಾರ್ಯಾಚರಣೆಯಲ್ಲಿ ನಗರಸಭೆ ಆರೋಗ್ಯ ನಿರೀಕ್ಷರಾದ ಮಲ್ಲಿಕಾರ್ಜುನ್ ಶರಣಪ್ಪ, ಶಾಂತರಾಜು, ವೆಂಕಟೇಶ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.</p>.<p>ಪಿಒಪಿ ಗಣೇಶ್ ಕಂಡು ಬಂದರೆ ಗಣೇಶ ಕೂರಿಸಿದವರು ಮತ್ತು ಅದನ್ನು ಮಾರಿದವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಪೌರಾಯುಕ್ತ ಎಂ.ಎಸ್.ಮಹದೇವ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>