<p>ರಾಮನಗರ: ರಾಜ್ಯದಲ್ಲಿನ ರಾಜಕೀಯ ಅಸ್ಥಿರತೆ ಕಾರಣಕ್ಕೆ ಆ. 3ರಂದು ಮೇಕೆದಾಟಿನಿಂದ ಬೆಂಗಳೂರಿನವರೆಗೆ ಹಮ್ಮಿಕೊಳ್ಳಲಾಗಿದ್ದ ಪಾದಯಾತ್ರೆಯನ್ನು ಮುಂದೂಡಿದ್ದೇವೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಅರಳಾಪುರ ಮಂಜೇಗೌಡ ತಿಳಿಸಿದರು.</p>.<p>‘ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಿದ್ದು, ಸಚಿವ ಸಂಪುಟ ಅಸ್ತಿತ್ವದಲ್ಲಿ ಇಲ್ಲ. ಇಲಾಖೆಗಳಲ್ಲಿ ಸಚಿವರೇ ಇಲ್ಲದ ಕಾರಣ ಪಾದಯಾತ್ರೆ ಹಮ್ಮಿಕೊಂಡರೂ ಪ್ರಯೋಜನ ಆಗದು. ಹೀಗಾಗಿ, ಈ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ನೂತನ ಸಚಿವ ಸಂಪುಟ ಆಯ್ಕೆ ದಿನದಂದೇ ಮೇಕೆದಾಟಿನಿಂದ ವಿಧಾನಸೌಧದ ತನಕ ಪಾದಯಾತ್ರೆ ಹಮ್ಮಿಕೊಳ್ಳಲಾಗುತ್ತದೆ’ ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಮಲೈ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಸಲುವಾಗಿಯೇ ಮೇಕೆದಾಟು ವಿಚಾರದಲ್ಲಿ ಉಪವಾಸ ಸತ್ಯಾಗ್ರಹ ಕುಳಿತುಕೊಳ್ಳುತ್ತಿದ್ದಾರೆ. ಇದು ಅವರಿಗೆ ಶೋಭೆ ತರುವ ಕೆಲಸವಲ್ಲ. ರಾಜ್ಯದಲ್ಲಿಯೇ ಕೆಲಸ ಮಾಡಿದ್ದ ಅಧಿಕಾರಿಗೆ ಈ ಕುರಿತು ಮಾಹಿತಿ ಇರಬೇಕು ಎಂದು ಹೇಳಿದರು.</p>.<p>ಸರ್ಕಾರ ಮೇಕೆದಾಟು ಅಣೆಕಟ್ಟೆ ಕಟ್ಟಲು ಮುಂದಾಗಬೇಕು. ರೈತ ಸಂಘ, ಕನ್ನಡಪರ ಹೋರಾಟಗಾರರು ಹಾಗೂ ಪಕ್ಷಾತೀತವಾಗಿ ಎಲ್ಲರೂ ಪಾದಯಾತ್ರೆ ಬೆಂಬಲಿಸಬೇಕು ಎಂದು ಕೋರಿದರು.</p>.<p>ಮೇಕೆದಾಟು ಹೋರಾಟ ಸಮಿತಿ ಅಧ್ಯಕ್ಷ ಸಂಪತ್ ಕುಮಾರ್ ಮಾತನಾಡಿ, ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಇದಕ್ಕೆ ಮುನ್ನುಡಿ ಬರೆಯಲಾಗುತ್ತದೆ ಎಂದರು.</p>.<p>ಸಂಘಟನೆಯ ಪದಾಧಿಕಾರಿಗಳಾದ ನಟಿ ಪಂಕಜಾ, ಡಾ.ಮಂಜುನಾಥ್, ಮಹದೇವ ಸಾಗರ್, ಕೆ. ಮಲ್ಲಯ್ಯ, ಮುಖಂಡರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ: ರಾಜ್ಯದಲ್ಲಿನ ರಾಜಕೀಯ ಅಸ್ಥಿರತೆ ಕಾರಣಕ್ಕೆ ಆ. 3ರಂದು ಮೇಕೆದಾಟಿನಿಂದ ಬೆಂಗಳೂರಿನವರೆಗೆ ಹಮ್ಮಿಕೊಳ್ಳಲಾಗಿದ್ದ ಪಾದಯಾತ್ರೆಯನ್ನು ಮುಂದೂಡಿದ್ದೇವೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಅರಳಾಪುರ ಮಂಜೇಗೌಡ ತಿಳಿಸಿದರು.</p>.<p>‘ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಿದ್ದು, ಸಚಿವ ಸಂಪುಟ ಅಸ್ತಿತ್ವದಲ್ಲಿ ಇಲ್ಲ. ಇಲಾಖೆಗಳಲ್ಲಿ ಸಚಿವರೇ ಇಲ್ಲದ ಕಾರಣ ಪಾದಯಾತ್ರೆ ಹಮ್ಮಿಕೊಂಡರೂ ಪ್ರಯೋಜನ ಆಗದು. ಹೀಗಾಗಿ, ಈ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ನೂತನ ಸಚಿವ ಸಂಪುಟ ಆಯ್ಕೆ ದಿನದಂದೇ ಮೇಕೆದಾಟಿನಿಂದ ವಿಧಾನಸೌಧದ ತನಕ ಪಾದಯಾತ್ರೆ ಹಮ್ಮಿಕೊಳ್ಳಲಾಗುತ್ತದೆ’ ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಮಲೈ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಸಲುವಾಗಿಯೇ ಮೇಕೆದಾಟು ವಿಚಾರದಲ್ಲಿ ಉಪವಾಸ ಸತ್ಯಾಗ್ರಹ ಕುಳಿತುಕೊಳ್ಳುತ್ತಿದ್ದಾರೆ. ಇದು ಅವರಿಗೆ ಶೋಭೆ ತರುವ ಕೆಲಸವಲ್ಲ. ರಾಜ್ಯದಲ್ಲಿಯೇ ಕೆಲಸ ಮಾಡಿದ್ದ ಅಧಿಕಾರಿಗೆ ಈ ಕುರಿತು ಮಾಹಿತಿ ಇರಬೇಕು ಎಂದು ಹೇಳಿದರು.</p>.<p>ಸರ್ಕಾರ ಮೇಕೆದಾಟು ಅಣೆಕಟ್ಟೆ ಕಟ್ಟಲು ಮುಂದಾಗಬೇಕು. ರೈತ ಸಂಘ, ಕನ್ನಡಪರ ಹೋರಾಟಗಾರರು ಹಾಗೂ ಪಕ್ಷಾತೀತವಾಗಿ ಎಲ್ಲರೂ ಪಾದಯಾತ್ರೆ ಬೆಂಬಲಿಸಬೇಕು ಎಂದು ಕೋರಿದರು.</p>.<p>ಮೇಕೆದಾಟು ಹೋರಾಟ ಸಮಿತಿ ಅಧ್ಯಕ್ಷ ಸಂಪತ್ ಕುಮಾರ್ ಮಾತನಾಡಿ, ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಇದಕ್ಕೆ ಮುನ್ನುಡಿ ಬರೆಯಲಾಗುತ್ತದೆ ಎಂದರು.</p>.<p>ಸಂಘಟನೆಯ ಪದಾಧಿಕಾರಿಗಳಾದ ನಟಿ ಪಂಕಜಾ, ಡಾ.ಮಂಜುನಾಥ್, ಮಹದೇವ ಸಾಗರ್, ಕೆ. ಮಲ್ಲಯ್ಯ, ಮುಖಂಡರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>