‘ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಿದ್ದು, ಸಚಿವ ಸಂಪುಟ ಅಸ್ತಿತ್ವದಲ್ಲಿ ಇಲ್ಲ. ಇಲಾಖೆಗಳಲ್ಲಿ ಸಚಿವರೇ ಇಲ್ಲದ ಕಾರಣ ಪಾದಯಾತ್ರೆ ಹಮ್ಮಿಕೊಂಡರೂ ಪ್ರಯೋಜನ ಆಗದು. ಹೀಗಾಗಿ, ಈ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ನೂತನ ಸಚಿವ ಸಂಪುಟ ಆಯ್ಕೆ ದಿನದಂದೇ ಮೇಕೆದಾಟಿನಿಂದ ವಿಧಾನಸೌಧದ ತನಕ ಪಾದಯಾತ್ರೆ ಹಮ್ಮಿಕೊಳ್ಳಲಾಗುತ್ತದೆ’ ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.