ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಕೆಶಿ- ಆನಂದ್ ಸಿಂಗ್ ಭೇಟಿ‌ ತಪ್ಪೇನಿಲ್ಲ: ಇಂಧನ ಸಚಿವ ವಿ. ಸುನಿಲ್ ಕುಮಾರ್

Last Updated 2 ಫೆಬ್ರುವರಿ 2022, 5:05 IST
ಅಕ್ಷರ ಗಾತ್ರ

ರಾಮನಗರ: ರಾಜಕೀಯದಲ್ಲಿ ಒಬ್ಬರು ಇನ್ನೊಬ್ಬರನ್ನು ಭೇಟಿ ಮಾಡಿದ ಮಾತ್ರಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಆನಂದ ಸಿಂಗ್ ಭೇಟಿ ಕುರಿತು ಸೋಲೂರಿನಲ್ಲಿ ಅವರು ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿದರು.

ಬಿಜೆಪಿಯಲ್ಲಿ ಮೂಲ ಪಕ್ಷದವರು ಹಾಗೂ ವಲಸಿಗರು ಎಂಬ ಬೇಧ ಇಲ್ಲ. ಪಕ್ಷಕ್ಕೆ ಬಂದ ಮೇಲೆ ಎಲ್ಲರೂ ನಮ್ಮವರೇ. ಎಲ್ಲರೂ ಒಟ್ಟಾಗಿಯೇ ಮುಂದಿನ ಚುನಾವಣೆಯನ್ನು ಎದುರಿಸುತ್ತೇವೆ ಎಂದರು.

ಕಾಂಗ್ರೆಸ್ ನವರಿಗೆ ಅಭದ್ರತೆ ಕಾಡುತ್ತಿದ್ದು, ಬೇರೆಯವರ ಬೆಂಬಲ ಬೇಕು ಎನಿಸಿರಬಹುದು. ನಮಗೆ ಆ ರೀತಿ ಅಭದ್ರತೆ ಇಲ್ಲ.

ಸಿದ್ದರಾಮಯ್ಯರಿಗೆ ಡಿ.ಕೆ. ಶಿವಕುಮಾರ್ , ಪರಮೇಶ್ವರ್ ಇಲ್ಲವೇ ಮತ್ಯಾರೋ ತಮ್ಮ ಸ್ಥಾನ ಹಿಡಿಯಬಹುದು ಎಂಬ ಅಭದ್ರತೆ ಕಾಡುತ್ತಿದೆ. ಹೀಗಾಗಿ ಮತ್ಯಾರೋ ತಮ್ಮ ಬೆಂಬಲಕ್ಕೆ ಬರಲಿ ಎಂದು ಕಾಯುತ್ತಿದ್ದಾರೆ. ಯಾರೂ ಬಿಜೆಪಿ ಬಿಟ್ಟು ಹೋಗುವುದಿಲ್ಲ. ಎಲ್ಲರೂ ಒಟ್ಟಾರೆ ಚುನಾವಣೆ ಎದುರಿಸುತ್ತೇವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT