ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ ಮನೆಗೆ ರಾಘವೇಂದ್ರ ರಾಜಕುಮಾರ್‌ ಭೇಟಿ

Last Updated 7 ನವೆಂಬರ್ 2021, 11:34 IST
ಅಕ್ಷರ ಗಾತ್ರ

ರಾಮನಗರ: ಚನ್ನಪಟ್ಟಣದ ಎಲೆಕೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಪುನೀತ್‌ ರಾಜಕುಮಾರ್ ಅಭಿಮಾನಿ ವೆಂಕಟೇಶ್‌ (25) ಮನೆಗೆ ನಟ ರಾಘವೇಂದ್ರ ರಾಜಕುಮಾರ್ ಭಾನುವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಪುನೀತ್‌ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ವೆಂಕಟೇಶ್‌ ಇದೇ 4ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಕಣ್ಣುಗಳನ್ನು ಕುಟುಂಬದವರು ದಾನ ಮಾಡಿದ್ದರು. ಅದನ್ನು ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಗತ್ಯವುಳ್ಳವರಿಗೆ ಕಸಿ ಮಾಡಲಾಗಿತ್ತು.

ವಿಷಯ ತಿಳಿದು ಭಾನುವಾರ ಎಲೆಕೇರಿಗೆ ಬಂದ ರಾಘವೇಂದ್ರ ರಾಜಕುಮಾರ್ ಅರ್ಧ ಗಂಟೆಗೂ ಹೆಚ್ಚು ಕಾಲ ವೆಂಕಟೇಶ್‌ ಕುಟುಂಬದವರೊಂದಿಗೆ ಮಾತುಕತೆ ನಡೆಸಿದರು. ನಿಮ್ಮ ಜೊತೆಗೆ ನಾವಿದ್ದೀವಿ, ಧೈರ್ಯವಾಗಿರಿ ಎಂದು ಸಾಂತ್ವನ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT