ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಗುತ್ತಿಗೆ ಕಂಪನಿಗೆ ನೋಟಿಸ್‌ ಜಾರಿ

‘ಪ್ರಜಾವಾಣಿ’ ವರದಿ ಫಲಶೃತಿ
Last Updated 5 ಅಕ್ಟೋಬರ್ 2019, 12:43 IST
ಅಕ್ಷರ ಗಾತ್ರ

ರಾಮನಗರ: ಕಣ್ವ ಜಲಾಶಯದ ಬಳಿ ನೀರಾವರಿ ಯೋಜನೆಯ ಪಂಪ್‌ಹೌಸ್‌ ನಿರ್ಮಾಣಕ್ಕಾಗಿ ಅನಧಿಕೃತವಾಗಿ ಡೈನಮೈಟ್‌ಗಳನ್ನು ಬಳಸಿರುವ ಗುತ್ತಿಗೆ ಕಂಪನಿಗೆ ಶನಿವಾರ ಜಿಲ್ಲಾಡಳಿತ ನೋಟಿಸ್‌ ನೀಡಿದೆ.

ಈ ಕುರಿತು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಪ್ರತಿಕ್ರಿಯಿಸಿ ‘ಕಾವೇರಿ ನೀರಾವರಿ ನಿಗಮದಿಂದ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಮೆಗಾ ಎಂಜಿನಿಯರ್ಸ್‌ ಕಂಪನಿ ಕಾಮಗಾರಿ ಗುತ್ತಿಗೆ ಪಡೆದಿದೆ. ಆದರೆ ಅನುಮತಿ ಇಲ್ಲದೆಯೇ ಸ್ಫೋಟಕ ಸಾಮಗ್ರಿ ಬಳಸುತ್ತಿರುವುದು, ಅದರಿಂದ ಮನೆಗಳಿಗೆ ಹಾನಿಯಾಗಿರುವುದು ಕಂಡು ಬಂದಿದೆ. ಇದರಿಂದ ಜಲಾಶಯಕ್ಕೂ ಹಾನಿಯಾಗುವ ಕುರಿತು ಮಾಧ್ಯಮಗಳು ವರದಿ ಮಾಡಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಕಾವೇರಿ ನೀರಾವರಿ ನಿಗಮ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಜಂಟಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ಎಲ್ಲ ಸಾಧ್ಯತೆಗಳನ್ನೂ ಕೂಲಂಕುಷವಾಗಿ ಪರಿಗಣಿಸಿಯೇ ಅನುಮತಿ ನೀಡಲಾಗುವುದು. ಒಂದೊಮ್ಮೆ ಅದರಿಂದ ಜಲಾಶಯಕ್ಕೆ ಹಾನಿಯಾಗುವ ಸಾಧ್ಯತೆ ಇದ್ದಲ್ಲಿ ಅನುಮತಿ ನಿರಾಕರಿಸುತ್ತೇವೆ’ ಎಂದು ತಿಳಿಸಿದರು.

ಡೈನಮೈಟ್ ಬಳಕೆಯಿಂದ ಜಲಾಶಯಕ್ಕೆ ಅಪಾಯ ಸಾಧ್ಯತೆ ಹಾಗೂ ಮನೆಗಳಿಗೆ ಹಾನಿಯಾಗಿರುವ ಕುರಿತು ‘ಪ್ರಜಾವಾಣಿ’ ಶನಿವಾರದ ಸಂಚಿಕೆಯಲ್ಲಿ ವರದಿ ಪ್ರಕಟಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT