<p><strong>ರಾಮನಗರ:</strong> ಕರಾವಳಿ ಭಾಗದಲ್ಲಿ ಇಸ್ಲಾಮಿಕ್ ಗೂಂಡಾ ಶಕ್ತಿ ಬೆಳೆಯುತ್ತಿದೆ. ಸರ್ಕಾರ ಅಲ್ಲಿ ಅಗತ್ಯಬಿದ್ದಲ್ಲಿ ಎನ್ಐಎ ಕಚೇರಿ ತೆರೆಯಬೇಕು ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಒತ್ತಾಯಿಸಿದರು.</p>.<p>‘ ಮಂಗಳೂರು ಬಾಂಬ್ ಸ್ಪೋಟದ ಹಿಂದೆ ತಮಿಳುನಾಡಿನ ಎಸ್ ಡಿಪಿಐ ಲಿಂಕ್ ಇದ್ದಂತೆ ಇದೆ. ಕೇರಳ, ತಮಿಳುನಾಡು ಗಡಿಯಲ್ಲಿ ಎಚ್ಚರಿಕೆ ವಹಿಸಬೇಕು’ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ‘ ಕುಕ್ಕರ್ ಬಾಂಬ್ ಸ್ಪೋಟದ ಆರೋಪಿ ಶಾರೀಕ್ ಈ ಹಿಂದೆ ಬಂಧನವಾಗಿದ್ದ ವ್ಯಕ್ತಿ. ಆತನ ಬಿಡುಗಡೆ ಆಗದಿದ್ದರೆ ಬಾಂಬ್ ಸ್ಪೋಟ ಆಗುತ್ತಿರಲಿಲ್ಲ’ ಎಂದರು.</p>.<p>ಸ್ವತಂತ್ರ ಸ್ಪರ್ಧೆ: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇನೆ. ಐದು ಕ್ಷೇತ್ರಗಳಲ್ಲಿ ಸರ್ವೆ ನಡೆದಿದ್ದು, ಡಿಸೆಂಬರ್ ಎರಡನೇ ವಾರದಲ್ಲಿ ಈ ಬಗ್ಗೆ ತೀರ್ಮಾನ ಪ್ರಕಟಿಸುತ್ತೇನೆ. 25 ಹಿಂದುತ್ವವಾದಿಗಳಿಗೆ ಟಿಕೆಟ್ ನೀಡುವಂತೆ ಬಿಜೆಪಿಯವರನ್ನು ಕೇಳಿದ್ದೆವು. ಅವರು ಕೊಟ್ಟಿಲ್ಲ. ಹೀಗಾಗಿ ಎಲ್ಲರೂ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದ್ದೇವೆ ಎಂದರು.</p>.<p>‘ ಕಾಂಗ್ರೆಸ್ ಕುಮ್ಮಕ್ಕಿನಿಂದ ಕನಕಪುರದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರ ಹೆಚ್ಚಿದೆ. ಸೋನಿಯಾ, ರಾಹುಲ್ ಮೆಚ್ಚಿಸಲು ಈ ಕೆಲಸ ನಡೆದಿದ್ದು, ಅಕ್ರಮವಾಗಿ ಚರ್ಚ್ಗಳು ತಲೆ ಎತ್ತುತ್ತಿವೆ. ಅವರಿಗೆ ಕುಮ್ಮಕ್ಕು ನೀಡಲು ಕಪಾಲಿ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಿಸಲು ಹೊರಟಿದ್ದಾರೆ. ಈಗ ರೇಷನ್ ಕಾರ್ಡ್ ಹಿಂದೆ ಏಸು ಭಾವಚಿತ್ರ ಮುದ್ರಿಸಿ ಹಂಚಿದ್ದಾರೆ. ಅಧಿಕಾರಿಗಳು ಇದೆಲ್ಲವನ್ನೂ ಹದ್ದುಬಸ್ತಿನಲ್ಲಿ ಇಡಬೇಕು’ ಎಂದರು.</p>.<p>‘ ದೆಹಲಿ ಘಟನೆಯಿಂದ ಹಿಂದೂ ಯುವತಿಯರು ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಪೋಷಕರೂ ಕೂಡ ಕಾಳಜಿ ವಹಿಸಬೇಕು’ ಎಂದು ಕಿವಿಮಾತು ಹೇಳಿದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಕರಾವಳಿ ಭಾಗದಲ್ಲಿ ಇಸ್ಲಾಮಿಕ್ ಗೂಂಡಾ ಶಕ್ತಿ ಬೆಳೆಯುತ್ತಿದೆ. ಸರ್ಕಾರ ಅಲ್ಲಿ ಅಗತ್ಯಬಿದ್ದಲ್ಲಿ ಎನ್ಐಎ ಕಚೇರಿ ತೆರೆಯಬೇಕು ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಒತ್ತಾಯಿಸಿದರು.</p>.<p>‘ ಮಂಗಳೂರು ಬಾಂಬ್ ಸ್ಪೋಟದ ಹಿಂದೆ ತಮಿಳುನಾಡಿನ ಎಸ್ ಡಿಪಿಐ ಲಿಂಕ್ ಇದ್ದಂತೆ ಇದೆ. ಕೇರಳ, ತಮಿಳುನಾಡು ಗಡಿಯಲ್ಲಿ ಎಚ್ಚರಿಕೆ ವಹಿಸಬೇಕು’ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ‘ ಕುಕ್ಕರ್ ಬಾಂಬ್ ಸ್ಪೋಟದ ಆರೋಪಿ ಶಾರೀಕ್ ಈ ಹಿಂದೆ ಬಂಧನವಾಗಿದ್ದ ವ್ಯಕ್ತಿ. ಆತನ ಬಿಡುಗಡೆ ಆಗದಿದ್ದರೆ ಬಾಂಬ್ ಸ್ಪೋಟ ಆಗುತ್ತಿರಲಿಲ್ಲ’ ಎಂದರು.</p>.<p>ಸ್ವತಂತ್ರ ಸ್ಪರ್ಧೆ: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇನೆ. ಐದು ಕ್ಷೇತ್ರಗಳಲ್ಲಿ ಸರ್ವೆ ನಡೆದಿದ್ದು, ಡಿಸೆಂಬರ್ ಎರಡನೇ ವಾರದಲ್ಲಿ ಈ ಬಗ್ಗೆ ತೀರ್ಮಾನ ಪ್ರಕಟಿಸುತ್ತೇನೆ. 25 ಹಿಂದುತ್ವವಾದಿಗಳಿಗೆ ಟಿಕೆಟ್ ನೀಡುವಂತೆ ಬಿಜೆಪಿಯವರನ್ನು ಕೇಳಿದ್ದೆವು. ಅವರು ಕೊಟ್ಟಿಲ್ಲ. ಹೀಗಾಗಿ ಎಲ್ಲರೂ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದ್ದೇವೆ ಎಂದರು.</p>.<p>‘ ಕಾಂಗ್ರೆಸ್ ಕುಮ್ಮಕ್ಕಿನಿಂದ ಕನಕಪುರದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರ ಹೆಚ್ಚಿದೆ. ಸೋನಿಯಾ, ರಾಹುಲ್ ಮೆಚ್ಚಿಸಲು ಈ ಕೆಲಸ ನಡೆದಿದ್ದು, ಅಕ್ರಮವಾಗಿ ಚರ್ಚ್ಗಳು ತಲೆ ಎತ್ತುತ್ತಿವೆ. ಅವರಿಗೆ ಕುಮ್ಮಕ್ಕು ನೀಡಲು ಕಪಾಲಿ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಿಸಲು ಹೊರಟಿದ್ದಾರೆ. ಈಗ ರೇಷನ್ ಕಾರ್ಡ್ ಹಿಂದೆ ಏಸು ಭಾವಚಿತ್ರ ಮುದ್ರಿಸಿ ಹಂಚಿದ್ದಾರೆ. ಅಧಿಕಾರಿಗಳು ಇದೆಲ್ಲವನ್ನೂ ಹದ್ದುಬಸ್ತಿನಲ್ಲಿ ಇಡಬೇಕು’ ಎಂದರು.</p>.<p>‘ ದೆಹಲಿ ಘಟನೆಯಿಂದ ಹಿಂದೂ ಯುವತಿಯರು ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಪೋಷಕರೂ ಕೂಡ ಕಾಳಜಿ ವಹಿಸಬೇಕು’ ಎಂದು ಕಿವಿಮಾತು ಹೇಳಿದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>