ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯುವ ನೀರು ಪೂರೈಕೆಗೆ ಆದ್ಯತೆ

Last Updated 11 ಮೇ 2019, 13:10 IST
ಅಕ್ಷರ ಗಾತ್ರ

ಮಾಗಡಿ: ‘ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು 13ನೇ ಹಣಕಾಸು ಯೋಜನೆಯಡಿ ಕೊಳವೆಬಾವಿ ಕೊರೆಸಿ ನೀರು ಸರಬರಾಜು ಮಾಡಲಾಗುವುದು’ ಎಂದು ಜೆಡಿಎಸ್‌ ಮುಖಂಡ ಎಂ.ಎನ್‌.ಮಂಜುನಾಥ ತಿಳಿಸಿದರು.

ಪಟ್ಟಣದ ಜ್ಯೋತಿನಗರದಲ್ಲಿ ಕೊಳವೆಬಾವಿ ಕೊರೆಯಲು ಚಾಲನೆ ನೀಡಿ ಅವರು ಮಾತನಾಡಿದರು. ‘ಬರ ಪರಿಹಾರ ಯೋಜನೆಯಡಿ ಕೊಳವೆಬಾವಿ ಕೊರೆಸಲು ಸರ್ಕಾರ ಅನುಮತಿ ನೀಡಿದೆ. ಮಂಚನಬೆಲೆ ಜಲಾಶಯದಿಂದಲೂ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ತಾಂತ್ರಿಕ ಸಮಸ್ಯೆಯಾದಾಗ ಕೊಳವೆಬಾವಿ ನೀರನ್ನು ಮನೆಗಳಿಗೆ ಪೂರೈಕೆ ಮಾಡಲಾಗುವುದು’ ಎಂದರು.

ವಾರ್ಡ್‌ನ ನಿವಾಸಿಗಳಾದ ರಾಜಣ್ಣ, ರಮೇಶ್, ಲವ, ಶ್ರೀಕಾಂತ್, ಚಂದ್ರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT