<p><strong>ಚನ್ನಪಟ್ಟಣ</strong>: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಭಾನುವಾರ (ಡಿ.22) ಪಟ್ಟಣದಲ್ಲಿ ಮೌನ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಮುಸ್ಲಿಂ ಸಮುದಾಯದ ಮುಖಂಡ ನಿಜಾಮ್ ಪೌಜ್ ದಾರ್ ತಿಳಿಸಿದರು.</p>.<p>ತಮ್ಮ ನಿವಾಸದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಈ ಪ್ರತಿಭಟನೆಯಲ್ಲಿ ಎಲ್ಲ ಸಮುದಾಯದ ಜನ, ತಾಲ್ಲೂಕಿನ ವಿವಿಧ ಪಕ್ಷಗಳ ಮುಖಂಡರು ಹಾಗೂ ಸಂಘಸಂಸ್ಥೆಗಳು ಭಾಗವಹಿಸಲಿದ್ದಾರೆ. ಶಾಂತಿಯುತ ಪ್ರತಿಭಟನೆ ನಡೆಸಿ ನಂತರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗುವುದು’ ಎಂದರು.</p>.<p>‘ಕೇಂದ್ರ ಸರ್ಕಾರವು ಈ ಮಸೂದೆಯನ್ನು ಜಾರಿಗೆ ತಂದು ದೇಶದ ಶಾಂತಿ ಕದಡುವಂತೆ ಮಾಡುತ್ತಿದೆ. ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಈ ಮಸೂದೆಯ ಮೂಲಕ ದೇಶದ ಅಲ್ಪಸಂಖ್ಯಾತರನ್ನು ತುಳಿಯಲು ಪ್ರಯತ್ನಿಸುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ದೇಶದೆಲ್ಲೆಡೆ ಈ ಮಸೂದೆ ವಿರುದ್ಧ ಉಗ್ರ ಪ್ರತಿಭಟನೆ ನಡೆಯುತ್ತಿದ್ದರೂ ಕೇಂದ್ರ ಸರ್ಕಾರ ಈ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಹೋರಾಟಗಾರರನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. ಪೌರತ್ವದ ವಿಚಾರವನ್ನು ಮುಂದು ಮಾಡಿಕೊಂಡು ದೇಶದ ಜನರನ್ನು ಒಡೆಯುವ ಕೆಲಸಕ್ಕೆ ಮುಂದಾಗಿರುವ ಬಿಜೆಪಿಯ ಕುತಂತ್ರಕ್ಕೆ ಅವಕಾಶ ನೀಡುವುದಿಲ್ಲ. ಕೇಂದ್ರ ಸರ್ಕಾರ ಈ ಮಸೂದೆಯನ್ನು ಹಿಂದಕ್ಕೆ ಪಡೆಯಬೇಕು’ ಎಂದು ಒತ್ತಾಯಿಸಿದರು.</p>.<p>ನಗರಸಭೆ ಸದಸ್ಯ ಜಬೀವುಲ್ಲಖಾನ್ ಘೋರಿ ಮಾತನಾಡಿ, ‘ಶುಕ್ರವಾರವೇ ಪ್ರತಿಭಟನೆಗೆ ತಯಾರಿ ಮಾಡಿಕೊಳ್ಳಲಾಗಿತ್ತು. ಆದರೆ ಸರ್ಕಾರ ನಿಷೇಧಾಜ್ಞೆ ಜಾರಿಗೊಳಿಸಿರುವ ಕಾರಣ ಭಾನುವಾರ ಪ್ರತಿಭಟನೆ ನಡೆಸಲಿದ್ದೇವೆ. ಈ ಶಾಂತಿಯುತ ಪ್ರತಿಭಟನೆಯಲ್ಲಿ ನಮ್ಮ ಸಮುದಾಯದ ಹಲವು ನಾಯಕರು, ಧರ್ಮಗುರುಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.</p>.<p>ಅಂಜುಮಾನ್ ಮೆಹದವೀಯ ಸಮಿತಿ ಅಧ್ಯಕ್ಷ ಸಾದತ್ ಮೆಹದಿ, ಬೀಡಿ ಕಾರ್ಮಿಕರ ಸಂಘದ ಅಧ್ಯಕ್ಷ ಮಹಮದ್ ಆಲಿ, ಮುಖಂಡರಾದ ಶಬೀರ್ ವುಲ್ಲಾ ಬೇಗ್, ಸೈಯ್ಯದ್ ಯಾಕೂಬ್, ಟೈಗರ್ ಮುಮ್ತಾಜ್, ಆಶಿಪ್ ಆಲಿಖಾನ್, ಮುಖಂಡ ಅಕ್ಕೂರು ಪುಟ್ಟರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಭಾನುವಾರ (ಡಿ.22) ಪಟ್ಟಣದಲ್ಲಿ ಮೌನ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಮುಸ್ಲಿಂ ಸಮುದಾಯದ ಮುಖಂಡ ನಿಜಾಮ್ ಪೌಜ್ ದಾರ್ ತಿಳಿಸಿದರು.</p>.<p>ತಮ್ಮ ನಿವಾಸದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಈ ಪ್ರತಿಭಟನೆಯಲ್ಲಿ ಎಲ್ಲ ಸಮುದಾಯದ ಜನ, ತಾಲ್ಲೂಕಿನ ವಿವಿಧ ಪಕ್ಷಗಳ ಮುಖಂಡರು ಹಾಗೂ ಸಂಘಸಂಸ್ಥೆಗಳು ಭಾಗವಹಿಸಲಿದ್ದಾರೆ. ಶಾಂತಿಯುತ ಪ್ರತಿಭಟನೆ ನಡೆಸಿ ನಂತರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗುವುದು’ ಎಂದರು.</p>.<p>‘ಕೇಂದ್ರ ಸರ್ಕಾರವು ಈ ಮಸೂದೆಯನ್ನು ಜಾರಿಗೆ ತಂದು ದೇಶದ ಶಾಂತಿ ಕದಡುವಂತೆ ಮಾಡುತ್ತಿದೆ. ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಈ ಮಸೂದೆಯ ಮೂಲಕ ದೇಶದ ಅಲ್ಪಸಂಖ್ಯಾತರನ್ನು ತುಳಿಯಲು ಪ್ರಯತ್ನಿಸುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ದೇಶದೆಲ್ಲೆಡೆ ಈ ಮಸೂದೆ ವಿರುದ್ಧ ಉಗ್ರ ಪ್ರತಿಭಟನೆ ನಡೆಯುತ್ತಿದ್ದರೂ ಕೇಂದ್ರ ಸರ್ಕಾರ ಈ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಹೋರಾಟಗಾರರನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. ಪೌರತ್ವದ ವಿಚಾರವನ್ನು ಮುಂದು ಮಾಡಿಕೊಂಡು ದೇಶದ ಜನರನ್ನು ಒಡೆಯುವ ಕೆಲಸಕ್ಕೆ ಮುಂದಾಗಿರುವ ಬಿಜೆಪಿಯ ಕುತಂತ್ರಕ್ಕೆ ಅವಕಾಶ ನೀಡುವುದಿಲ್ಲ. ಕೇಂದ್ರ ಸರ್ಕಾರ ಈ ಮಸೂದೆಯನ್ನು ಹಿಂದಕ್ಕೆ ಪಡೆಯಬೇಕು’ ಎಂದು ಒತ್ತಾಯಿಸಿದರು.</p>.<p>ನಗರಸಭೆ ಸದಸ್ಯ ಜಬೀವುಲ್ಲಖಾನ್ ಘೋರಿ ಮಾತನಾಡಿ, ‘ಶುಕ್ರವಾರವೇ ಪ್ರತಿಭಟನೆಗೆ ತಯಾರಿ ಮಾಡಿಕೊಳ್ಳಲಾಗಿತ್ತು. ಆದರೆ ಸರ್ಕಾರ ನಿಷೇಧಾಜ್ಞೆ ಜಾರಿಗೊಳಿಸಿರುವ ಕಾರಣ ಭಾನುವಾರ ಪ್ರತಿಭಟನೆ ನಡೆಸಲಿದ್ದೇವೆ. ಈ ಶಾಂತಿಯುತ ಪ್ರತಿಭಟನೆಯಲ್ಲಿ ನಮ್ಮ ಸಮುದಾಯದ ಹಲವು ನಾಯಕರು, ಧರ್ಮಗುರುಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.</p>.<p>ಅಂಜುಮಾನ್ ಮೆಹದವೀಯ ಸಮಿತಿ ಅಧ್ಯಕ್ಷ ಸಾದತ್ ಮೆಹದಿ, ಬೀಡಿ ಕಾರ್ಮಿಕರ ಸಂಘದ ಅಧ್ಯಕ್ಷ ಮಹಮದ್ ಆಲಿ, ಮುಖಂಡರಾದ ಶಬೀರ್ ವುಲ್ಲಾ ಬೇಗ್, ಸೈಯ್ಯದ್ ಯಾಕೂಬ್, ಟೈಗರ್ ಮುಮ್ತಾಜ್, ಆಶಿಪ್ ಆಲಿಖಾನ್, ಮುಖಂಡ ಅಕ್ಕೂರು ಪುಟ್ಟರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>