<p>ಕನಕಪುರ: ‘ಕೊರೊನಾ ಮೂರನೇ ಅಲೆಯು ದೇಶದ ಕೆಲವೆಡೆ ಕಾಣಿಸಿಕೊಳ್ಳುತ್ತಿದ್ದು, ಸಾರ್ವಜನಿಕರು ಸೋಂಕಿನ ಬಗ್ಗೆ ನಿರ್ಲಕ್ಷ್ಯ ತಾಳದೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು’ ಎಂದು ಹಾರೋಹಳ್ಳಿ ರೋಟರಿ ಕಾರ್ಯದರ್ಶಿ ರಾಂಪುರ ಪ್ರಕಾಶ್ ಮನವಿ ಮಾಡಿದರು.</p>.<p>ತಾಲ್ಲೂಕಿನ ಹಾರೋಹಳ್ಳಿ ರೋಟರಿ ಸಂಸ್ಥೆಯಿಂದ ಗೋದೂರು ಮತ್ತು ಪಡುವಣಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಪಲ್ಸ್ ಆಕ್ಸಿಮೀಟರ್ ಹಾಗೂ ಎನ್-95 ಮಾಸ್ಕ್ ವಿತರಿಸಿ ಅವರು ಮಾತನಾಡಿದರು.</p>.<p>ವಿಶ್ವದಲ್ಲಿ ಕೊರೊನಾ ಸೋಂಕಿನ ಭೀಕರ ಪರಿಣಾಮವನ್ನು ಎರಡನೇ ಅಲೆಯಲ್ಲಿ ಕಂಡಿದ್ದೇವೆ. ನಮ್ಮ ಕುಟುಂಬಸ್ಥರು, ಸಂಬಂಧಿಕರನ್ನು ಕಳೆದುಕೊಂಡಿದ್ದೇವೆ ಎಂದರು.</p>.<p>ಇದೆಲ್ಲವೂ ನಮ್ಮ ನಿರ್ಲಕ್ಷ್ಯದಿಂದಲೇ ಆಗಿದ್ದು, ಮೂರನೇ ಅಲೆಯಲ್ಲಿ ಅದಕ್ಕೆ ಅವಕಾಶ ಕೊಡಬಾರದು. ನಮ್ಮ ಎಚ್ಚರಿಕೆಯನ್ನು ನಾವೇ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.</p>.<p>ಪಡುವಣಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಹನುಮಂತಯ್ಯ ಮಾತನಾಡಿ, ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕೈಗೊಳ್ಳುವ ಕಾರ್ಯಕ್ರಮಗಳನ್ನು ಜನರು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದರು.</p>.<p>ಯಾರು ವ್ಯಾಕ್ಸಿನ್ ತೆಗೆದುಕೊಂಡಿಲ್ಲವೋ ಅವರು ವ್ಯಾಕ್ಸಿನ್ ಪಡೆದುಕೊಳ್ಳಬೇಕು. ಸೋಂಕಿನ ಲಕ್ಷಣ ಕಾಣುತ್ತಿದ್ದಂತೆ ವೈದ್ಯರ ಬಳಿಗೆ ಬಂದು ಪರೀಕ್ಷೆ ಮಾಡಿಸಿ ಅಗತ್ಯ ಔಷಧೋಪಚಾರ ತೆಗೆದುಕೊಳ್ಳಬೇಕು ಎಂದು ಸಲಹೆ<br />ನೀಡಿದರು.</p>.<p>ಗೋದೂರು ಪಿಎಚ್ಸಿಯ ವೈದ್ಯಾಧಿಕಾರಿ ಡಾ.ವರಲಕ್ಷ್ಮಿ, ರೋಟರಿ ಮಾಜಿ ಅಧ್ಯಕ್ಷರಾದ ಮಹಮ್ಮದ್ ಏಜಾಸ್, ಡಾ.ಪ್ರಾಣೇಶ್, ಏಡುಮಡು ಕಾಂತರಾಜು, ಭರತ್, ದೀಪಕ್, ಖಜಾಂಚಿ ಜಗದೀಶ್, ಸದಸ್ಯರಾದ ಹೊನ್ನೇಗೌಡ, ಪ್ರದೀಪ್<br />ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಪುರ: ‘ಕೊರೊನಾ ಮೂರನೇ ಅಲೆಯು ದೇಶದ ಕೆಲವೆಡೆ ಕಾಣಿಸಿಕೊಳ್ಳುತ್ತಿದ್ದು, ಸಾರ್ವಜನಿಕರು ಸೋಂಕಿನ ಬಗ್ಗೆ ನಿರ್ಲಕ್ಷ್ಯ ತಾಳದೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು’ ಎಂದು ಹಾರೋಹಳ್ಳಿ ರೋಟರಿ ಕಾರ್ಯದರ್ಶಿ ರಾಂಪುರ ಪ್ರಕಾಶ್ ಮನವಿ ಮಾಡಿದರು.</p>.<p>ತಾಲ್ಲೂಕಿನ ಹಾರೋಹಳ್ಳಿ ರೋಟರಿ ಸಂಸ್ಥೆಯಿಂದ ಗೋದೂರು ಮತ್ತು ಪಡುವಣಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಪಲ್ಸ್ ಆಕ್ಸಿಮೀಟರ್ ಹಾಗೂ ಎನ್-95 ಮಾಸ್ಕ್ ವಿತರಿಸಿ ಅವರು ಮಾತನಾಡಿದರು.</p>.<p>ವಿಶ್ವದಲ್ಲಿ ಕೊರೊನಾ ಸೋಂಕಿನ ಭೀಕರ ಪರಿಣಾಮವನ್ನು ಎರಡನೇ ಅಲೆಯಲ್ಲಿ ಕಂಡಿದ್ದೇವೆ. ನಮ್ಮ ಕುಟುಂಬಸ್ಥರು, ಸಂಬಂಧಿಕರನ್ನು ಕಳೆದುಕೊಂಡಿದ್ದೇವೆ ಎಂದರು.</p>.<p>ಇದೆಲ್ಲವೂ ನಮ್ಮ ನಿರ್ಲಕ್ಷ್ಯದಿಂದಲೇ ಆಗಿದ್ದು, ಮೂರನೇ ಅಲೆಯಲ್ಲಿ ಅದಕ್ಕೆ ಅವಕಾಶ ಕೊಡಬಾರದು. ನಮ್ಮ ಎಚ್ಚರಿಕೆಯನ್ನು ನಾವೇ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.</p>.<p>ಪಡುವಣಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಹನುಮಂತಯ್ಯ ಮಾತನಾಡಿ, ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕೈಗೊಳ್ಳುವ ಕಾರ್ಯಕ್ರಮಗಳನ್ನು ಜನರು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದರು.</p>.<p>ಯಾರು ವ್ಯಾಕ್ಸಿನ್ ತೆಗೆದುಕೊಂಡಿಲ್ಲವೋ ಅವರು ವ್ಯಾಕ್ಸಿನ್ ಪಡೆದುಕೊಳ್ಳಬೇಕು. ಸೋಂಕಿನ ಲಕ್ಷಣ ಕಾಣುತ್ತಿದ್ದಂತೆ ವೈದ್ಯರ ಬಳಿಗೆ ಬಂದು ಪರೀಕ್ಷೆ ಮಾಡಿಸಿ ಅಗತ್ಯ ಔಷಧೋಪಚಾರ ತೆಗೆದುಕೊಳ್ಳಬೇಕು ಎಂದು ಸಲಹೆ<br />ನೀಡಿದರು.</p>.<p>ಗೋದೂರು ಪಿಎಚ್ಸಿಯ ವೈದ್ಯಾಧಿಕಾರಿ ಡಾ.ವರಲಕ್ಷ್ಮಿ, ರೋಟರಿ ಮಾಜಿ ಅಧ್ಯಕ್ಷರಾದ ಮಹಮ್ಮದ್ ಏಜಾಸ್, ಡಾ.ಪ್ರಾಣೇಶ್, ಏಡುಮಡು ಕಾಂತರಾಜು, ಭರತ್, ದೀಪಕ್, ಖಜಾಂಚಿ ಜಗದೀಶ್, ಸದಸ್ಯರಾದ ಹೊನ್ನೇಗೌಡ, ಪ್ರದೀಪ್<br />ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>