<p><strong>ರಾಮನಗರ</strong>: ತಾಲ್ಲೂಕಿನ ಚನ್ನಮಾನಹಳ್ಳಿಯಲ್ಲಿ ಸೋಮವಾರ ದೇವಸ್ಥಾನದ ನಲ್ಲಿಯಲ್ಲಿ ನೀರು ಹಿಡಿಯಲು ಹೋದ ಪರಿಶಿಷ್ಟ ಜಾತಿಗೆ ಸೇರಿದ 13 ವರ್ಷದ ಬಾಲಕಿಯನ್ನು ದೇವಸ್ಥಾನದ ಪೂಜಾರಿ ಹಾಗೂ ಆತನ ಸಹೋದರಿ ಜಾತಿ ಹೆಸರಲ್ಲಿ ನಿಂದಿಸಿದ್ದಾರೆ.</p>.<p>ಇದನ್ನು ಪ್ರಶ್ನಿಸಿದ ಬಾಲಕಿಯ ಚಿಕ್ಕಪ್ಪ ಹಾಗೂ ಸ್ನೇಹಿತನ ಮೇಲೆ ಹಲ್ಲೆ ನಡೆದಿದೆ. ಈ ಕುರಿತು ಎಸ್ಸಿ ಮತ್ತು ಎಸ್ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮನೆ ಸಮೀಪದ ಮಾರಮ್ಮ ದೇವಸ್ಥಾನದ ಆವರಣದಲ್ಲಿರುವ ನಲ್ಲಿಯಲ್ಲಿ ನೀರು ತುಂಬಲು ಬಾಲಕಿ ಬಿಂದಿಗೆಯೊಂದಿಗೆ ತೆರಳಿದ್ದಳು. ಇದನ್ನು ಗಮನಿಸಿದ ದೇವಸ್ಥಾನದ ಪೂಜಾರಿ ಕುಮಾರ್ ಮತ್ತು ಆತನ ಸಹೋದರಿ ಯಶೋಧಾ, ‘ದೇವಸ್ಥಾನ ಮೈಲಿಗೆ ಮಾಡುತ್ತೀರಿ’ ಎಂದು ನಿಂದಿಸಿದರು ಎಂದು ಬಾಲಕಿ ಮನೆಯಲ್ಲಿ ತಿಳಿಸಿದ್ದಾಳೆ.</p>.<p>ಈ ಬಗ್ಗೆ ವಿಚಾರಿಸಲು ಸ್ನೇಹಿತ ಸಿ.ಬಿ. ಜಯಕುಮಾರ್ ಎಂಬುವರ ಜೊತೆ ಬಾಲಕಿಯ ಚಿಕ್ಕಪ್ಪ ಪ್ರಸನ್ನಕುಮಾರ್ ದೇವಸ್ಥಾನಕ್ಕೆ ಹೋದಾಗ ಗಲಾಟೆಯಾಗಿದೆ.</p>.<p>‘ಕುಮಾರ್ ಮತ್ತು ಯಶೋಧಾ ತಮ್ಮ ಕೆನ್ನೆಗೆ ಹೊಡೆದು, ಕಲ್ಲಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದರು’ ಎಂದು ಬಾಲಕಿಯ ಚಿಕ್ಕಪ್ಪ ಪ್ರಸನ್ನಕುಮಾರ್ ದೂರಿನಲ್ಲಿ ತಿಳಿಸಿದ್ದಾರೆ.</p>.<p>ಕೂಗಾಟ ಕೇಳಿದ ಗ್ರಾಮಸ್ಥರು ಸ್ಥಳಕ್ಕೆ ಬಂದು ಜಗಳ ಬಿಡಿಸಿದ್ದಾರೆ. ಘಟನೆಯಿಂದಾಗಿ ಗ್ರಾಮದಲ್ಲಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.</p>.<p>ಹಲ್ಲೆಯಿಂದ ಗಾಯಗೊಂಡ ಪ್ರಸನ್ನಕುಮಾರ್ ಮತ್ತು ಜಯಕುಮಾರ್ ಅವರು ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಐಜೂರು ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದಾರೆ.</p>.<p>ಪೊಲೀಸರು ಕುಮಾರ್ ಮತ್ತು ಯಶೋಧಾ ವಿರುದ್ಧ ಎಸ್ಸಿ ಮತ್ತು ಎಸ್ಟಿ ದೌರ್ಜನ್ಯ ತಡೆ ಕಾಯ್ದೆ, ಐಪಿಸಿ 323, 324, 504, 506 ಹಾಗೂ 34 ಕಲಂ ಅಡಿ ಪ್ರಕರಣ ದಾಖಲಿಸಿದ್ದಾರೆ.</p>.<p>‘ಘಟನೆ ಬಳಿಕ ದೇವಸ್ಥಾನದ ಪೂಜಾರಿ ಕುಮಾರ್ ತಲೆಮರೆಸಿಕೊಂಡಿದ್ದಾರೆ. ಗ್ರಾಮಕ್ಕೆ ಭೇಟಿ ನೀಡಿ ಯಶೋಧಾ ಅವರನ್ನು ವಿವರಣೆ ಕೇಳಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ತಾಲ್ಲೂಕಿನ ಚನ್ನಮಾನಹಳ್ಳಿಯಲ್ಲಿ ಸೋಮವಾರ ದೇವಸ್ಥಾನದ ನಲ್ಲಿಯಲ್ಲಿ ನೀರು ಹಿಡಿಯಲು ಹೋದ ಪರಿಶಿಷ್ಟ ಜಾತಿಗೆ ಸೇರಿದ 13 ವರ್ಷದ ಬಾಲಕಿಯನ್ನು ದೇವಸ್ಥಾನದ ಪೂಜಾರಿ ಹಾಗೂ ಆತನ ಸಹೋದರಿ ಜಾತಿ ಹೆಸರಲ್ಲಿ ನಿಂದಿಸಿದ್ದಾರೆ.</p>.<p>ಇದನ್ನು ಪ್ರಶ್ನಿಸಿದ ಬಾಲಕಿಯ ಚಿಕ್ಕಪ್ಪ ಹಾಗೂ ಸ್ನೇಹಿತನ ಮೇಲೆ ಹಲ್ಲೆ ನಡೆದಿದೆ. ಈ ಕುರಿತು ಎಸ್ಸಿ ಮತ್ತು ಎಸ್ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮನೆ ಸಮೀಪದ ಮಾರಮ್ಮ ದೇವಸ್ಥಾನದ ಆವರಣದಲ್ಲಿರುವ ನಲ್ಲಿಯಲ್ಲಿ ನೀರು ತುಂಬಲು ಬಾಲಕಿ ಬಿಂದಿಗೆಯೊಂದಿಗೆ ತೆರಳಿದ್ದಳು. ಇದನ್ನು ಗಮನಿಸಿದ ದೇವಸ್ಥಾನದ ಪೂಜಾರಿ ಕುಮಾರ್ ಮತ್ತು ಆತನ ಸಹೋದರಿ ಯಶೋಧಾ, ‘ದೇವಸ್ಥಾನ ಮೈಲಿಗೆ ಮಾಡುತ್ತೀರಿ’ ಎಂದು ನಿಂದಿಸಿದರು ಎಂದು ಬಾಲಕಿ ಮನೆಯಲ್ಲಿ ತಿಳಿಸಿದ್ದಾಳೆ.</p>.<p>ಈ ಬಗ್ಗೆ ವಿಚಾರಿಸಲು ಸ್ನೇಹಿತ ಸಿ.ಬಿ. ಜಯಕುಮಾರ್ ಎಂಬುವರ ಜೊತೆ ಬಾಲಕಿಯ ಚಿಕ್ಕಪ್ಪ ಪ್ರಸನ್ನಕುಮಾರ್ ದೇವಸ್ಥಾನಕ್ಕೆ ಹೋದಾಗ ಗಲಾಟೆಯಾಗಿದೆ.</p>.<p>‘ಕುಮಾರ್ ಮತ್ತು ಯಶೋಧಾ ತಮ್ಮ ಕೆನ್ನೆಗೆ ಹೊಡೆದು, ಕಲ್ಲಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದರು’ ಎಂದು ಬಾಲಕಿಯ ಚಿಕ್ಕಪ್ಪ ಪ್ರಸನ್ನಕುಮಾರ್ ದೂರಿನಲ್ಲಿ ತಿಳಿಸಿದ್ದಾರೆ.</p>.<p>ಕೂಗಾಟ ಕೇಳಿದ ಗ್ರಾಮಸ್ಥರು ಸ್ಥಳಕ್ಕೆ ಬಂದು ಜಗಳ ಬಿಡಿಸಿದ್ದಾರೆ. ಘಟನೆಯಿಂದಾಗಿ ಗ್ರಾಮದಲ್ಲಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.</p>.<p>ಹಲ್ಲೆಯಿಂದ ಗಾಯಗೊಂಡ ಪ್ರಸನ್ನಕುಮಾರ್ ಮತ್ತು ಜಯಕುಮಾರ್ ಅವರು ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಐಜೂರು ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದಾರೆ.</p>.<p>ಪೊಲೀಸರು ಕುಮಾರ್ ಮತ್ತು ಯಶೋಧಾ ವಿರುದ್ಧ ಎಸ್ಸಿ ಮತ್ತು ಎಸ್ಟಿ ದೌರ್ಜನ್ಯ ತಡೆ ಕಾಯ್ದೆ, ಐಪಿಸಿ 323, 324, 504, 506 ಹಾಗೂ 34 ಕಲಂ ಅಡಿ ಪ್ರಕರಣ ದಾಖಲಿಸಿದ್ದಾರೆ.</p>.<p>‘ಘಟನೆ ಬಳಿಕ ದೇವಸ್ಥಾನದ ಪೂಜಾರಿ ಕುಮಾರ್ ತಲೆಮರೆಸಿಕೊಂಡಿದ್ದಾರೆ. ಗ್ರಾಮಕ್ಕೆ ಭೇಟಿ ನೀಡಿ ಯಶೋಧಾ ಅವರನ್ನು ವಿವರಣೆ ಕೇಳಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>