<p><strong>ರಾಮನಗರ:</strong>ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಸ್ವಾಮಿತ್ವ’ ಯೋಜನೆಗೆ ಆಯ್ಕೆಯಾದ ರಾಜ್ಯದ ಏಕೈಕ ಜಿಲ್ಲೆ ಎಂಬ ಹೆಗ್ಗಳಿಕೆ ಹೊಂದಿರುವ ರಾಮನಗರ ಜಿಲ್ಲೆಯ ನಾಲ್ಕು ಗ್ರಾಮಗಳ 157 ಫಲಾನುಭವಿಗಳಿಗೆ ಪ್ರಧಾನಿನರೇಂದ್ರ ಮೋದಿ ಭಾನುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಆಸ್ತಿ ಕಾರ್ಡ್ ವಿತರಿಸಿದರು.</p>.<p>ರಾಮನಗರ ಸೇರಿದಂತೆ ದೇಶದ ಆರು ರಾಜ್ಯಗಳ ಒಟ್ಟು 763 ಗ್ರಾಮಗಳ ಫಲಾನುಭವಿಗಳ ಮೊಬೈಲ್ ಫೋನುಗಳಿಗೆ ಆಸ್ತಿ ಕಾರ್ಡ್ ಡೌನ್ ಲೋಡ್ ಲಿಂಕ್ ಕಳುಹಿಸುವ ಮೂಲಕ ಅವರು ಯೋಜನೆ ಅನುಷ್ಠಾನಕ್ಕೆ ವಿಧ್ಯುಕ್ತ ಚಾಲನೆ ನೀಡಿದರು.</p>.<p>ರಾಮನಗರ ತಾಲ್ಲೂಕಿನ ಎಂ.ಜಿ ಪಾಳ್ಯ, ಮಜರೆ ಸೀಬಕಟ್ಟೆ ಹಾಗೂ ಮಾಗಡಿ ತಾಲ್ಲೂಕಿನ ಬಸವಾಪಟ್ಟಣ ಮತ್ತು ಮಜರೆ ಶಂಭಯ್ಯನ ಪಾಳ್ಯ ಗ್ರಾಮಗಳ 157 ಫಲಾನುಭವಿಗಳು ಮೊಬೈಲ್ನಲ್ಲಿ ಡೌನ್ ಲೋಡ್ ಲಿಂಕ್ ಅನ್ನು ಸ್ವೀಕರಿಸಿದರು.</p>.<p>ಪ್ರಧಾನಿ ವಿಡಿಯೊ ಕಾನ್ಫರೆನ್ಸ್ ಬಳಿಕ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಇಕ್ರಂ ಅವರು ನಾಲ್ಕು ಗ್ರಾಮಗಳ ಫಲಾನುಭವಿಗಳಿಗೆಸಾಂಕೇತಿಕವಾಗಿ ಆಸ್ತಿ ಕಾರ್ಡ್ ವಿತರಿಸಿದರು.</p>.<p>ಉಳಿದ ಫಲಾನುಭವಿಗಳಿಗೆ ಭೂದಾಖಲೆಗಳ ಉಪನಿರ್ದೇಶಕ ಬಿ.ಜಿ. ಉಮೇಶ ಮತ್ತು ಗ್ರಾಮ ಪಂಚಾಯಿತಿ, ಭೂಮಾಪನ ಇಲಾಖೆಯ ಸಿಬ್ಬಂದಿ ಆಸ್ತಿ ಕಾರ್ಡ್ ವಿತರಿಸಿದರು.</p>.<p><strong>ಅಕ್ರಮಕ್ಕೆ ತಡೆ:</strong></p>.<p><span class="Bullet">l</span> ಸ್ಪಷ್ಟವಾಗಿ ಮತ್ತು ವೈಜ್ಞಾನಿಕವಾಗಿಆಸ್ತಿ ತೆರಿಗೆ ನಿರ್ಧರಿಸಲು ಸಹಾಯ</p>.<p><span class="Bullet">l</span> ಗ್ರಾಮ ಪಂಚಾಯಿತಿಗಳು ಆರ್ಥಿಕವಾಗಿ ಸದೃಢವಾಗಲು ನೆರವು</p>.<p><span class="Bullet">l</span> ಆಸ್ತಿಯ ಮಾಲೀಕರು ಪರಸ್ಪರ ವಿವಾದಗಳಿಲ್ಲದೆ ಆಸ್ತಿ ಸಮಸ್ಯೆ ಪರಿಹರಿಸಿಕೊಳ್ಳಲು ಸಹಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong>ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಸ್ವಾಮಿತ್ವ’ ಯೋಜನೆಗೆ ಆಯ್ಕೆಯಾದ ರಾಜ್ಯದ ಏಕೈಕ ಜಿಲ್ಲೆ ಎಂಬ ಹೆಗ್ಗಳಿಕೆ ಹೊಂದಿರುವ ರಾಮನಗರ ಜಿಲ್ಲೆಯ ನಾಲ್ಕು ಗ್ರಾಮಗಳ 157 ಫಲಾನುಭವಿಗಳಿಗೆ ಪ್ರಧಾನಿನರೇಂದ್ರ ಮೋದಿ ಭಾನುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಆಸ್ತಿ ಕಾರ್ಡ್ ವಿತರಿಸಿದರು.</p>.<p>ರಾಮನಗರ ಸೇರಿದಂತೆ ದೇಶದ ಆರು ರಾಜ್ಯಗಳ ಒಟ್ಟು 763 ಗ್ರಾಮಗಳ ಫಲಾನುಭವಿಗಳ ಮೊಬೈಲ್ ಫೋನುಗಳಿಗೆ ಆಸ್ತಿ ಕಾರ್ಡ್ ಡೌನ್ ಲೋಡ್ ಲಿಂಕ್ ಕಳುಹಿಸುವ ಮೂಲಕ ಅವರು ಯೋಜನೆ ಅನುಷ್ಠಾನಕ್ಕೆ ವಿಧ್ಯುಕ್ತ ಚಾಲನೆ ನೀಡಿದರು.</p>.<p>ರಾಮನಗರ ತಾಲ್ಲೂಕಿನ ಎಂ.ಜಿ ಪಾಳ್ಯ, ಮಜರೆ ಸೀಬಕಟ್ಟೆ ಹಾಗೂ ಮಾಗಡಿ ತಾಲ್ಲೂಕಿನ ಬಸವಾಪಟ್ಟಣ ಮತ್ತು ಮಜರೆ ಶಂಭಯ್ಯನ ಪಾಳ್ಯ ಗ್ರಾಮಗಳ 157 ಫಲಾನುಭವಿಗಳು ಮೊಬೈಲ್ನಲ್ಲಿ ಡೌನ್ ಲೋಡ್ ಲಿಂಕ್ ಅನ್ನು ಸ್ವೀಕರಿಸಿದರು.</p>.<p>ಪ್ರಧಾನಿ ವಿಡಿಯೊ ಕಾನ್ಫರೆನ್ಸ್ ಬಳಿಕ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಇಕ್ರಂ ಅವರು ನಾಲ್ಕು ಗ್ರಾಮಗಳ ಫಲಾನುಭವಿಗಳಿಗೆಸಾಂಕೇತಿಕವಾಗಿ ಆಸ್ತಿ ಕಾರ್ಡ್ ವಿತರಿಸಿದರು.</p>.<p>ಉಳಿದ ಫಲಾನುಭವಿಗಳಿಗೆ ಭೂದಾಖಲೆಗಳ ಉಪನಿರ್ದೇಶಕ ಬಿ.ಜಿ. ಉಮೇಶ ಮತ್ತು ಗ್ರಾಮ ಪಂಚಾಯಿತಿ, ಭೂಮಾಪನ ಇಲಾಖೆಯ ಸಿಬ್ಬಂದಿ ಆಸ್ತಿ ಕಾರ್ಡ್ ವಿತರಿಸಿದರು.</p>.<p><strong>ಅಕ್ರಮಕ್ಕೆ ತಡೆ:</strong></p>.<p><span class="Bullet">l</span> ಸ್ಪಷ್ಟವಾಗಿ ಮತ್ತು ವೈಜ್ಞಾನಿಕವಾಗಿಆಸ್ತಿ ತೆರಿಗೆ ನಿರ್ಧರಿಸಲು ಸಹಾಯ</p>.<p><span class="Bullet">l</span> ಗ್ರಾಮ ಪಂಚಾಯಿತಿಗಳು ಆರ್ಥಿಕವಾಗಿ ಸದೃಢವಾಗಲು ನೆರವು</p>.<p><span class="Bullet">l</span> ಆಸ್ತಿಯ ಮಾಲೀಕರು ಪರಸ್ಪರ ವಿವಾದಗಳಿಲ್ಲದೆ ಆಸ್ತಿ ಸಮಸ್ಯೆ ಪರಿಹರಿಸಿಕೊಳ್ಳಲು ಸಹಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>