<p>ಕನಕಪುರ (ರಾಮನಗರ): ಕನ್ನಡ ಹುಟ್ಟಿದ್ದು ತಮಿಳು ಭಾಷೆಯಿಂದ ಎಂದು ಹೇಳಿರುವ ಬಹುಭಾಷಾ ನಟ ಪಾರ್ಥಸಾರಥಿ ಶ್ರೀನಿವಾಸನ್ ಅಲಿಯಾಸ್ ಕಮಲ್ ಹಾಸನ್ ವಿರುದ್ಧ ಕನಕಪುರದ ಎರಡನೇ ಅಪರ ಸಿವಿಲ್ ಮತ್ತು ಜೆಎಂಎಫ್ ನ್ಯಾಯಾಲಯದಲ್ಲಿ ಸೋಮವಾರ ಖಾಸಗಿ ಕ್ರಿಮಿನಲ್ ದೂರು(ಪಿಸಿಆರ್) ದಾಖಲಾಗಿದೆ.</p>.<p>ಶ್ರೀರಾಮ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ನಾಗಾರ್ಜುನಗೌಡ ಎಂಬುವರು ಈ ದೂರು ದಾಖಲಿಸಿದ್ದಾರೆ. ಜುಲೈ 5ರಂದು ನ್ಯಾಯಾಲಯವು ದೂರನ್ನು ವಿಚಾರಣೆ ಕೈಗೆತ್ತಿಕೊಳ್ಳಲಿದೆ. </p>.<p>ಭಾಷಾ ವಿವಾದ ಸೃಷ್ಟಿಸಿದ ಕಮಲ್ ಹಾಸನ್ ಹೇಳಿಕೆ ನೀಡಿದ ಆ ಸಮಾರಂಭದಲ್ಲಿ ಭಾಗವಹಿಸಿದ್ದ ನಟ ಡಾ.ಶಿವರಾಜ್ಕುಮಾರ್ ಅವರನ್ನು ಪ್ರತ್ಯಕ್ಷ ಸಾಕ್ಷಿಯಾಗಿ ಪರಿಗಣಿಸುವಂತೆ ದೂರುದಾರರು ಮನವಿ ಮಾಡಿದ್ದಾರೆ. </p>.<p>ಕನ್ನಡ ಭಾಷೆಯ ಹುಟ್ಟಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ನಾಗಾರ್ಜುನಗೌಡ ಜೂನ್ 5 ರಂದು ಕನಕಪುರ ಗ್ರಾಮಾಂತರ ಠಾಣೆಗೆ ಖಾಸಗಿ ದೂರು ಸಲ್ಲಿಸಿದ್ದರು.</p>.<p>ಆದರೆ, ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಜೂನ್ 9 ರಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದರು. ಅವರಿಂದಲೂ ಸೂಕ್ತ ಸ್ಪಂದನೆ ದೊರೆಯಲಿಲ್ಲ ಎಂದು ಕನಕಪುರ ಜೆಎಂಎಫ್ ನ್ಯಾಯಾಲಯದಲ್ಲಿ ಜೂನ್ 30 ರಂದು ಖಾಸಗಿ ದೂರು ದಾಖಲಿಸಿದ್ದಾರೆ.</p>.<p>‘ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ನ್ಯಾಯಾಲಯವು ಉಚ್ಚ ಹಾಗೂ ಸರ್ವೋಚ್ಚ ನ್ಯಾಯಾಲಯಗಳ ಅಭಿಪ್ರಾಯ ಹಾಗೂ ಪ್ರತ್ಯಕ್ಷ್ಯ ಸಾಕ್ಷಿಯ ಹೇಳಿಕೆ ಪರಿಗಣಿಸಬೇಕು. ಪ್ರಕರಣದ ತನಿಖೆ ನಡೆಸಿ, ಚಾರ್ಜ್ಶಿಟ್ ಸಲ್ಲಿಸುವಂತೆ ರಾಮನಗರ ಪೊಲೀಸ್ ವರಿಷ್ಠಾಧಿಕಾರಿಗೆ ನಿರ್ದೇಶನ ನೀಡಬೇಕು’ ಎಂದು ಅವರು ದೂರಿನಲ್ಲಿ ಕೋರಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಪುರ (ರಾಮನಗರ): ಕನ್ನಡ ಹುಟ್ಟಿದ್ದು ತಮಿಳು ಭಾಷೆಯಿಂದ ಎಂದು ಹೇಳಿರುವ ಬಹುಭಾಷಾ ನಟ ಪಾರ್ಥಸಾರಥಿ ಶ್ರೀನಿವಾಸನ್ ಅಲಿಯಾಸ್ ಕಮಲ್ ಹಾಸನ್ ವಿರುದ್ಧ ಕನಕಪುರದ ಎರಡನೇ ಅಪರ ಸಿವಿಲ್ ಮತ್ತು ಜೆಎಂಎಫ್ ನ್ಯಾಯಾಲಯದಲ್ಲಿ ಸೋಮವಾರ ಖಾಸಗಿ ಕ್ರಿಮಿನಲ್ ದೂರು(ಪಿಸಿಆರ್) ದಾಖಲಾಗಿದೆ.</p>.<p>ಶ್ರೀರಾಮ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ನಾಗಾರ್ಜುನಗೌಡ ಎಂಬುವರು ಈ ದೂರು ದಾಖಲಿಸಿದ್ದಾರೆ. ಜುಲೈ 5ರಂದು ನ್ಯಾಯಾಲಯವು ದೂರನ್ನು ವಿಚಾರಣೆ ಕೈಗೆತ್ತಿಕೊಳ್ಳಲಿದೆ. </p>.<p>ಭಾಷಾ ವಿವಾದ ಸೃಷ್ಟಿಸಿದ ಕಮಲ್ ಹಾಸನ್ ಹೇಳಿಕೆ ನೀಡಿದ ಆ ಸಮಾರಂಭದಲ್ಲಿ ಭಾಗವಹಿಸಿದ್ದ ನಟ ಡಾ.ಶಿವರಾಜ್ಕುಮಾರ್ ಅವರನ್ನು ಪ್ರತ್ಯಕ್ಷ ಸಾಕ್ಷಿಯಾಗಿ ಪರಿಗಣಿಸುವಂತೆ ದೂರುದಾರರು ಮನವಿ ಮಾಡಿದ್ದಾರೆ. </p>.<p>ಕನ್ನಡ ಭಾಷೆಯ ಹುಟ್ಟಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ನಾಗಾರ್ಜುನಗೌಡ ಜೂನ್ 5 ರಂದು ಕನಕಪುರ ಗ್ರಾಮಾಂತರ ಠಾಣೆಗೆ ಖಾಸಗಿ ದೂರು ಸಲ್ಲಿಸಿದ್ದರು.</p>.<p>ಆದರೆ, ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಜೂನ್ 9 ರಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದರು. ಅವರಿಂದಲೂ ಸೂಕ್ತ ಸ್ಪಂದನೆ ದೊರೆಯಲಿಲ್ಲ ಎಂದು ಕನಕಪುರ ಜೆಎಂಎಫ್ ನ್ಯಾಯಾಲಯದಲ್ಲಿ ಜೂನ್ 30 ರಂದು ಖಾಸಗಿ ದೂರು ದಾಖಲಿಸಿದ್ದಾರೆ.</p>.<p>‘ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ನ್ಯಾಯಾಲಯವು ಉಚ್ಚ ಹಾಗೂ ಸರ್ವೋಚ್ಚ ನ್ಯಾಯಾಲಯಗಳ ಅಭಿಪ್ರಾಯ ಹಾಗೂ ಪ್ರತ್ಯಕ್ಷ್ಯ ಸಾಕ್ಷಿಯ ಹೇಳಿಕೆ ಪರಿಗಣಿಸಬೇಕು. ಪ್ರಕರಣದ ತನಿಖೆ ನಡೆಸಿ, ಚಾರ್ಜ್ಶಿಟ್ ಸಲ್ಲಿಸುವಂತೆ ರಾಮನಗರ ಪೊಲೀಸ್ ವರಿಷ್ಠಾಧಿಕಾರಿಗೆ ನಿರ್ದೇಶನ ನೀಡಬೇಕು’ ಎಂದು ಅವರು ದೂರಿನಲ್ಲಿ ಕೋರಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>