ಶಾಸಕ ಸಾ.ರಾ. ಮಹೇಶ್ ಮಾತನಾಡಿ ‘ನಿನ್ನೆ ನಡೆದ ಘಟನೆ ನಾವೆಲ್ಲರೂ ತಲೆ ತಗ್ಗಿಸುವಂತಹದ್ದು. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಯಾರೇ ಆಗಿರಲಿ. ದೇಶದಲ್ಲಿ ಬದುಕುತ್ತಿರುವ ಪ್ರತಿಯೊಬ್ಬರೂ ಈ ದೇಶಕ್ಕೆ ಋಣಿಯಾಗಿರಬೇಕು. ಪೊಲೀಸರು ಈ ಬಗ್ಗೆ ಈಗಾಗಲೇ ಕ್ರಮ ತೆಗೆದುಕೊಂಡಿದ್ದಾರೆ. ಹೋರಾಟದ ವೇಳೆ ಕಿಡಿ ಹಚ್ಚಲೆಂದೇ ಕೆಲವು ಕಿಡಿಗೇಡಿಗಳು ಇರುತ್ತಾರೆ. ಆಯೋಜಕರು ಇದರ ಸೂಕ್ಷ್ಮತೆ ಅರಿಯಬೇಕಿತ್ತು. ಪೊಲೀಸರು ಮೊದಲೇ ಕ್ರಮ ವಹಿಸಬಹುದಿತ್ತು’ ಎಂದರು.