<p><strong>ರಾಮನಗರ:</strong> ‘ಭಾರತೀಯರಾಗಿ ಪಾಕಿಸ್ತಾನದ ಪರ ಘೋಷಣೆ ಕೂಗುವವರು ವಿಕೃತ ಮನಸ್ಸಿನವರು. ಅವರ ವಿರುದ್ಧ ತೆಗೆದುಕೊಳ್ಳುವ ಕ್ರಮವು ಇತರರಿಗೆ ಪಾಠ ಆಗಬೇಕು’ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಆಗ್ರಹಿಸಿದರು.</p>.<p>ನಗರದಲ್ಲಿ ಶುಕ್ರವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ‘ಅಮೂಲ್ಯ ಎಂಬ ಯುವತಿ ಪಾಕ್ ಪರ ಘೋಷಣೆ ಕೂಗಿರುವುದು ನಿಜಕ್ಕೂ ಆಶ್ಚರ್ಯ ತಂದಿದೆ. ಮುಂದೆ ಇನ್ಯಾರೂ ಈ ರೀತಿ ಮಾಡದಂತೆ ಸಂಘಟಕರು ಎಚ್ಚರ ವಹಿಸಬೇಕು’ ಎಂದರು.</p>.<p>ಶಾಸಕ ಸಾ.ರಾ. ಮಹೇಶ್ ಮಾತನಾಡಿ ‘ನಿನ್ನೆ ನಡೆದ ಘಟನೆ ನಾವೆಲ್ಲರೂ ತಲೆ ತಗ್ಗಿಸುವಂತಹದ್ದು. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಯಾರೇ ಆಗಿರಲಿ. ದೇಶದಲ್ಲಿ ಬದುಕುತ್ತಿರುವ ಪ್ರತಿಯೊಬ್ಬರೂ ಈ ದೇಶಕ್ಕೆ ಋಣಿಯಾಗಿರಬೇಕು. ಪೊಲೀಸರು ಈ ಬಗ್ಗೆ ಈಗಾಗಲೇ ಕ್ರಮ ತೆಗೆದುಕೊಂಡಿದ್ದಾರೆ. ಹೋರಾಟದ ವೇಳೆ ಕಿಡಿ ಹಚ್ಚಲೆಂದೇ ಕೆಲವು ಕಿಡಿಗೇಡಿಗಳು ಇರುತ್ತಾರೆ. ಆಯೋಜಕರು ಇದರ ಸೂಕ್ಷ್ಮತೆ ಅರಿಯಬೇಕಿತ್ತು. ಪೊಲೀಸರು ಮೊದಲೇ ಕ್ರಮ ವಹಿಸಬಹುದಿತ್ತು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ‘ಭಾರತೀಯರಾಗಿ ಪಾಕಿಸ್ತಾನದ ಪರ ಘೋಷಣೆ ಕೂಗುವವರು ವಿಕೃತ ಮನಸ್ಸಿನವರು. ಅವರ ವಿರುದ್ಧ ತೆಗೆದುಕೊಳ್ಳುವ ಕ್ರಮವು ಇತರರಿಗೆ ಪಾಠ ಆಗಬೇಕು’ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಆಗ್ರಹಿಸಿದರು.</p>.<p>ನಗರದಲ್ಲಿ ಶುಕ್ರವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ‘ಅಮೂಲ್ಯ ಎಂಬ ಯುವತಿ ಪಾಕ್ ಪರ ಘೋಷಣೆ ಕೂಗಿರುವುದು ನಿಜಕ್ಕೂ ಆಶ್ಚರ್ಯ ತಂದಿದೆ. ಮುಂದೆ ಇನ್ಯಾರೂ ಈ ರೀತಿ ಮಾಡದಂತೆ ಸಂಘಟಕರು ಎಚ್ಚರ ವಹಿಸಬೇಕು’ ಎಂದರು.</p>.<p>ಶಾಸಕ ಸಾ.ರಾ. ಮಹೇಶ್ ಮಾತನಾಡಿ ‘ನಿನ್ನೆ ನಡೆದ ಘಟನೆ ನಾವೆಲ್ಲರೂ ತಲೆ ತಗ್ಗಿಸುವಂತಹದ್ದು. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಯಾರೇ ಆಗಿರಲಿ. ದೇಶದಲ್ಲಿ ಬದುಕುತ್ತಿರುವ ಪ್ರತಿಯೊಬ್ಬರೂ ಈ ದೇಶಕ್ಕೆ ಋಣಿಯಾಗಿರಬೇಕು. ಪೊಲೀಸರು ಈ ಬಗ್ಗೆ ಈಗಾಗಲೇ ಕ್ರಮ ತೆಗೆದುಕೊಂಡಿದ್ದಾರೆ. ಹೋರಾಟದ ವೇಳೆ ಕಿಡಿ ಹಚ್ಚಲೆಂದೇ ಕೆಲವು ಕಿಡಿಗೇಡಿಗಳು ಇರುತ್ತಾರೆ. ಆಯೋಜಕರು ಇದರ ಸೂಕ್ಷ್ಮತೆ ಅರಿಯಬೇಕಿತ್ತು. ಪೊಲೀಸರು ಮೊದಲೇ ಕ್ರಮ ವಹಿಸಬಹುದಿತ್ತು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>