ಪ್ರತಿಮೆ ಕಾಮಗಾರಿಗೆ ಚಾಲನೆ ನೀಡಿ ವರ್ಷವೇ ಕಳೆದಿದೆ. ಅರಣ್ಯ ಇಲಾಖೆಗೆ ಸೇರಿದ ಜಾಗ ಇದಾಗಿದ್ದು, ದಾಖಲೆಗಳ ಹಸ್ತಾಂತರಕ್ಕೆ ಸಮಯ ವ್ಯಯವಾಗಿದೆ. ಕೆಲವು ರಾಜಕೀಯ ಕಾರಣಗಳಿಂದಾಗಿ ಕಾಮಗಾರಿ ಇನ್ನೂ ಆರಂಭಗೊಂಡಿಲ್ಲ. ಪ್ರತಿಮೆ ಹೊರತುಪಡಿಸಿ ಒಟ್ಟು 17 ಎಕರೆ ಪ್ರದೇಶದಲ್ಲಿ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಸರ್ಕಾರ ಆಸಕ್ತಿ ತೋರಿದೆ. ಧ್ಯಾನ ಕೇಂದ್ರ, ಸಭಾಂಗಣ, ಮ್ಯೂಸಿಯಂ, ಉದ್ಯಾನ, ದಾಸೋಹ ಭವನ, ಯಾತ್ರಿಗಳಿಗಾಗಿ ಭವನಗಳು ಮೊದಲಾದವುಗಳ ನಿರ್ಮಾಣಕ್ಕೆ ಯೋಜಿಸಲಾಗಿದೆ. ಆದರೆ ಈ ಎಲ್ಲ ಯೋಜನೆಗಳು ಇನ್ನೂ ಕಾಗದದ ರೂಪದಲ್ಲಿಯೇ ಇವೆ.